ಮಂಡ್ಯ: ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯಲ್ಲೀಗ ದಳಪತಿಗೆ ಆಘಾತ ನೀಡುವ ಬೆಳವಣಿಗೆ ನಡೆಯವ ಕಾಲ ಸನಿಹದಲ್ಲಿದೆ ಎಂಬ ಚರ್ಚೆ ಶುರುವಾಗಿದೆ.
ಮುಂಬರುವ ವಿಧಾನಸಭಾ ಚುನಾವಣೆ ವೇಳೆಗೆ ಜಿಲ್ಲೆಯಲ್ಲಿ ಜೆಡಿಎಸ್ನ ಒಂದಿಬ್ರು ಮಾಜಿ-ಹಾಲಿ ಶಾಸಕರು ಕಾಂಗ್ರೆಸ್ಗೆ ಸೇರುವ ಒಂದಿಬ್ರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಸುಳಿವು ಕೊಟ್ಟಿದ್ದು, ಆ ಮೂಲಕ ಪಕ್ಷದಲ್ಲಿ ತಳಮಳ ಹೆಚ್ಚಿಸಿದ್ದಾರೆ. ಇದನ್ನೂ ಓದಿರಿ Video| ಬಿಜೆಪಿ ಮುಖಂಡನ ಬರ್ತ್ ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಇನ್ನೊಂದು ವಾರದಲ್ಲಿ ಜೆಡಿಎಸ್ ಮುಖಂಡ ಮಧುಬಂಗಾರಪ್ಪ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ನಿನ್ನೆಯಷ್ಟೇ(ಗುರುವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದನ್ನು ಪುಷ್ಟೀಕರಿಸುವಂತೆ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಮಧುಬಂಗಾರಪ್ಪ ನಿನ್ನೆ ಕೆಲ ಕಾಲ ಸಮಾಲೋಚನೆ ನಡೆಸಿದ್ದರು. ಇದಾದ ಮರುದಿನವೇ ಮಂಡ್ಯ ಜಿಲ್ಲೆಯಲ್ಲೂ ಜೆಡಿಎಸ್ನ ಕೆಲ ನಾಯಕರು ಪಕ್ಷ ತೊರೆಯಲಿದ್ದಾರೆ ಎಂದು ಚೆಲುವರಾಯಸ್ವಾಮಿ ಹೇಳಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ನ ಒಂದಿಬ್ಬರು ಕಾಂಗ್ರೆಸ್ಗೆ ಬರ್ತಾರೆ ಅನ್ನೊ ಬಗ್ಗೆ ನಾನೂ ಕೇಳಿದ್ದೀನಿ. ಆದ್ರೆ ನನ್ನ ಜೊತೆ ಯಾರೂ ಮಾತನಾಡಿಲ್ಲ. ಚುನಾವಣೆ ಸಮಯದಲ್ಲಿ ಮುಖಂಡರು ಪಕ್ಷ ಬದಲಾವಣೆ ಮಾಡೋದು ಸಾಮಾನ್ಯ. ಅದು ಮುಂದಿನ ಚುನಾವಣೆಯಲ್ಲೂ ನಡೆಯಲಿದೆ. ಬಿಜೆಪಿಯಿಂದಲೂ ಕಾಂಗ್ರೆಸ್ಗೆ ಪಕ್ಷಾಂತರ ಆಗುವ ಸಾಧ್ಯತೆ ಇದೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಚೆಲುವರಾಯಸ್ವಾಮಿ ಹೇಳಿದರು.
ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಓಪನ್ ಚಾಲೆಂಜ್! ಇವರಿಬ್ಬರ ಟಾರ್ಗೆಟ್ ಏನು?
ಬಂಧನ ವಾರಂಟ್ ಜಾರಿಯಾಗುತ್ತಿದ್ದಂತೆ ಕೋರ್ಟ್ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್
ತಹಸೀಲ್ದಾರ್ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!
ಜೆಡಿಎಸ್ಗೆ ಮತ್ತೊಂದು ಶಾಕ್! ಮುಂದಿನ ವಾರವೇ ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ