ಚಿಕ್ಕಮಗಳೂರು:ಲಿಂಗದಹಳ್ಳಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿಯಲ್ಲಿ 17 ವರ್ಷದ ಬಾಲಕರ ವಿಭಾಗದಲ್ಲಿ ಮಂಡ್ಯ ಜಿಲ್ಲೆ ಪ್ರಥಮ, ಮೈಸೂರು ಜಿಲ್ಲೆ ದ್ವೀತಿಯ ಸ್ಥಾನ ಪಡೆದಿದರೆ, ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ ಹಾಗೂ ಉಡುಪಿ ದ್ವೀತೀಯ ಸ್ಥಾನ ಪಡೆದುಕೊಂಡಿತು.
14 ವರ್ಷದ ಬಾಲಕರ ವಿಭಾಗದಲ್ಲಿ ಹಾಸನ ತಂಡ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡರೆ, ಬಾಲಕಿಯರ ವಿಭಾಗದಲ್ಲಿ ಚಿಕ್ಕಮಗಳೂರು ಪ್ರಥಮ, ಮೈಸೂರು ತಂಡ ದ್ವಿತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯಲ್ಲಿರುವ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿವೆ.
17 ವರ್ಷದ ಬಾಲಕರ ವಿಭಾಗದಲ್ಲಿ ಚಿಕ್ಕಮಗಳೂರಿನ ಪುನೀತ್ ಉತ್ತಮ ಓಟಗಾರ, ಮಂಡ್ಯದ ಕೆ.ಪಿ.ಚೇತನ್ ಉತ್ತಮ ದಾಳಿಗಾರ ಪ್ರಶಸ್ತಿ ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಚಿಕ್ಕಮಗಳೂರಿನ ಶೋಭಾ, ಉತ್ತಮ ಓಟಗಾರ್ತಿ, ಮೈಸೂರಿನ ಎನ್.ಮಾನಸ ಉತ್ತಮ ದಾಳಿಗಾರ್ತಿ ಪ್ರಶಸ್ತಿಗೆ ಭಾಜನರಾದರು.
14 ವರ್ಷದ ಬಾಲಕರ ವಿಭಾಗದಲ್ಲಿ ಹಾಸನದ ಸೃಜನ್ ಗೌಡ ಉತ್ತಮ ಓಟಗಾರ, ದಕ್ಷಿಣ ಕನ್ನಡದ ಅಬ್ದುಲ್ ಹಸನ್ ಉತ್ತಮ ದಾಳಿಗಾರ ಪ್ರಶಸ್ತಿಗೆ ಪಾತ್ರರಾದರು. ಬಾಲಕಿಯರ ವಿಭಾಗದಲ್ಲಿ ಚಿಕ್ಕಮಗಳೂರಿನ ಪಂಚಮಿ ಉತ್ತಮ ದಾಳಿಗಾರ್ತಿ, ಮೈಸೂರಿನ ಇಂಚರ ಉತ್ತಮ ಓಟಗಾರ್ತಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಖೋ ಖೋ ಪಂದ್ಯಾವಳಿಯಲ್ಲಿ ಮಂಡ್ಯ, ಮೈಸೂರು ತಂಡ ಪ್ರಥಮ

You Might Also Like
ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…
ಪಿರಿಯಡ್ಸ್ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips
ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…
ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic
garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…