ಮಂಡ್ಯ: ವಿಚಾರಣೆ ನೆಪದಲ್ಲಿ ಮಹಿಳೆಯನ್ನು ಠಾಣೆಗೆ ಕರೆತಂದು ಪೊಲೀಸರು ಥಳಿಸಿರುವ ಆರೋಪ ಕೇಳಿಬಂದಿದ್ದು, ಮಂಡ್ಯದ ಪೂರ್ವ ಠಾಣಾ ಪೊಲೀಸರ ವಿರುದ್ಧ ಈ ಗಂಭೀರ ಆರೋಪ ಮಾಡಲಾಗಿದೆ.
ಮಂಡ್ಯ ನಗರದ ರೂಪಾದೇವಿ ಎಂಬಾಕೆಯ ಮೇಲೆ ಹಲ್ಲೆಯನ್ನು ನಡೆಸಲಾಗಿದ್ದು, ರೂಪಾಗೆ ಸೇರಿದ ಹಸು ಮಹಿಳಾ ಪೇದೆ ಸ್ಕೂಟರ್ಗೆ ಅಡ್ಡ ಬಂದ ಹಿನ್ನಲೆಯಲ್ಲಿ ಲೇಡಿ ಕಾನ್ಸ್ ಟೇಬಲ್ ವನಜಾಕ್ಷಿ ಬಿದ್ದು ಗಾಯಗೊಂಡಿದ್ದರು. ಆಗ ಮಹಿಳಾ ಪೇದೆ ಪರಿಹಾರ ನೀಡುವಂತೆ ರೂಪಾದೇವಿಗೆ ಒತ್ತಡ ಹಾಕುತ್ತಿದ್ದರು. ಹಣ ನೀಡದಿದ್ದಕ್ಕೆ ರೂಪಾಗೆ ವಿಚಾರಣೆ ನೆಪದಲ್ಲಿ ಠಾಣೆಗೆ ಕರೆಸಿ ಥಳಿಸಿದ್ದು, ಪೊಲೀಸರ ಥಳಿತದಿಂದ ಮಹಿಳೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೈ ಕಾಲಿಗೆ ಹಿಗ್ಗಾಮುಗ್ಗ ಥಳಿಸಿರುವ ಆರೋಪ ಕೇಳಿಬಂದಿದ್ದು, ಮಹಿಳಾ ಪೇದೆ ಅಧಿಕಾರ ದುರುಪಯೋಗಪಡಿಸಿಕೊಂಡು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಮಹಿಳೆಯ ನೆರವಿಗೆ ಹೋರಾಟಗಾರರು ದಾವಿಸಿದ್ದಾರೆ.
ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದು, ನಾಳೆ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ.
ರಾತ್ರಿಯಿಡೀ ರೈತರು-ಪೊಲೀಸರ ನಡುವೆ ವಾಗ್ವಾದ; ಮಾತುಕತೆಗೆ ಸರ್ಕಾರ ಸಿದ್ಧ ಎಂದ ಕೃಷಿ ಸಚಿವ ಅರ್ಜುನ್ ಮುಂಡಾ