More

    ಹಿಂದೊಮ್ಮೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದಲ್ಲಿ ಏಳು ತಿಂಗಳು ಸೆರೆವಾಸ ಅನುಭವಿಸಿದ್ದ ಬಾಂಬರ್ ಆದಿತ್ಯ ರಾವ್​

    ಚಿಕ್ಕಬಳ್ಳಾಪುರ: ಮಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್​ ಇಟ್ಟು ಸದ್ಯ ಪೊಲೀಸರಿಂದ ಬಂಧಿತನಾಗಿರುವ ಆರೋಪಿ ಆದಿತ್ಯರಾವ್​ ಈ ಹಿಂದೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ಬಾಂಬ್​ ಇಡುವುದಾಗಿ ಬೆದರಿಸಿದ್ದ ಎನ್ನಲಾಗಿದೆ.

    ಬೆದರಿಕೆ ಕರೆ ಮಾಡಿದ್ದ ಆದಿತ್ಯರಾವ್​ನನ್ನು ಏರ್​ಪೋರ್ಟ್​ ಪೊಲೀಸರು ಬಂಧಿಸಿದ್ದರು. ಆತನನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದಲ್ಲಿ ಏಳು ತಿಂಗಳು ಬಂಧನದಲ್ಲಿ ಇಡಲಾಗಿತ್ತು.

    ಆದರೆ ಆದಿತ್ಯ ರಾವ್​ ಜೈಲಿನಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ. ಸದಾ ಯೋಚನೆ ಮಾಡುತ್ತ ಒಬ್ಬನೇ ಕುಳಿತಿರುತ್ತಿದ್ದ. ಒಮ್ಮೊಮ್ಮೆ ಊಟಕ್ಕೂ ಬಾರದೆ ಯೋಚನೆ ಮಾಡುತ್ತಿದ್ದ. ಆತನ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾದಾಗ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎನ್ನಲಾಗಿದೆ (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts