ಮಂಗಳೂರು: ಗಾಂಜಾ ಪ್ರಕರಣದಲ್ಲಿ ಇಬ್ಬರು ವೈದ್ಯರು ಮತ್ತು 7 ವೈದ್ಯಕೀಯ ವಿದ್ಯಾಥಿಗಳ ವಿರುದ್ಧ ಕೆ.ಎಂ.ಸಿ. ಆಸ್ಪತ್ರೆ ಆಡಳಿತ ಮಂಡಳಿ ಶಿಸ್ತುಕ್ರಮ ಜರುಗಿಸಿದೆ. ಎಲ್ಲರನ್ನೂ ಅಮಾನತು ಮಾಡಿದೆ.
ಅತ್ತಾವರದ ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ.ಸಮೀರ್ ಮತ್ತು ಉಡುಪಿಯ ಮಣಿಪಾಲ ಕೆಎಂಸಿ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಮುತ್ತು ಅವರನ್ನ ಕೆಲಸದಿಂದಲೇ ಅಮಾನತು ಮಾಡಲಾಗಿದೆ.
ವೈದ್ಯಕೀಯ ವಿದ್ಯಾರ್ಥಿಗಳಾದ ಡಾ.ಕಿಶೋರಿಲಾಲ್, ಡಾ.ನದೀಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ(26), ಡಾ.ರಿಯಾ ಚಡ್ಡ(22), ಡಾ.ಇರಾ ಬಾಸಿನ(23), ಡಾ.ಕ್ಷಿತಿಜ್ ಗುಪ್ತ(25), ಡಾ.ಹರ್ಷಕುಮಾರ್ ವಿ.ಎಸ್. ಅವರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ಗೆ ಕೆಎಂಸಿ ಡೀನ್ ಉನ್ನಿಕೃಷ್ಣನ್ ಮಾಹಿತಿ ನೀಡಿದ್ದಾರೆ.
ಬಾಳಿ ಬದುಕಬೇಕಿದ್ದ ತುಮಕೂರಿನ ಮೂವರು ಸಹೋದರಿಯರು ಒಂಟಿ ಮನೆಯಲ್ಲಿ ದುರಂತ ಅಂತ್ಯ! ಇವರ ಕಣ್ಣೀರ ಕಥೆ ಹೇಳತೀರದು…
https://www.vijayavani.net/lalbagh-flower-show/
ಪ್ರವೀಣ್ ನೆಟ್ಟಾರು ಹತ್ಯೆ: ಮತ್ತಿಬ್ಬರು ಆರೋಪಿಗಳ ಸುಳಿವು ಕೊಟ್ಟವರಿಗೆ 10 ಲಕ್ಷ ನಗದು ಬಹುಮಾನ ಘೋಷಿಸಿದ NIA