ಮಂಗಳೂರು: ಗಾಂಜಾ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ ಸಿಬಂದಿ ಪ್ರಕಾಶ್ ಗಾವಡೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಕಾರಾಗೃಹದಲ್ಲಿ ಕೆಐಎಸ್ಎಫ್ ಸಿಬಂದಿ ತಪಾಸಣೆ ನಡೆಸುವ ಸಂದರ್ಭದಲ್ಲಿ ಪ್ರಕಾಶ್ ಬಳಿ ಗಾಂಜಾ ಪತ್ತೆಯಾಗಿತ್ತು. ಈ ಬಗ್ಗೆ ಇತ್ತೀಚೆಗೆ ಬರ್ಕೆ ಠಾಣೆಯಲ್ಲಿ ಎನ್ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.