ಡಿ.15ರಂದು ಕದ್ರಿಪಾರ್ಕ್‌ನಲ್ಲಿ ಬೃಹತ್ ವೈನ್ ಮೇಳ- ಗ್ರಾಹಕರ ಬೇಡಿಕೆ ಹಿನ್ನೆಲೆ

blank

ಮಂಗಳೂರು: ನಗರದ ಕದ್ರಿ ಪಾರ್ಕ್‌ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ.

ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಬೆಳಗ್ಗೆ 10.30ರಿಂದ ರಾತ್ರಿ 9.30 ಗಂಟೆ ತನಕ ವೈನ್ ಮೇಳ ನಡೆಯಲಿದೆ.

ದ್ರಾಕ್ಷಾ ರಸದ ಉಪಯೋಗಗಳು, ಸವಿಯುವ ಕ್ರಮ ಮುಂತಾದ ಸೂಕ್ತ ಮಾಹಿತಿಗಳೊಂದಿಗೆ ಬ್ರಾೃಂಡುಗಳ ಪ್ರದರ್ಶನ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಉತ್ಪನ್ನಗಳು, ಎಲ್ಲಾ ಕಂಪನಿಗಳ ಹೊಸ ಹೊಸ ಪಾನೀಯಗಳನ್ನು ಪ್ರದರ್ಶಿಸಿ ಪರಿಚಯಿಸುವ ಹಾಗೂ ದ್ರಾಕ್ಷಾ ರಸದ (ವೈನ್ ) ರುಚಿಯನ್ನು ಸವಿದು ಬೇಕಾದ ರೀತಿಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ದ್ರಾಕ್ಷಾ ರಸ ಉತ್ಪಾದಕ ಸಂಸ್ಥೆಗಳ ಮೂಲಕ ಅತ್ಯಾಕರ್ಷಕ ದರ ಹಾಗೂ ಅತ್ಯುತ್ತಮ ಕೊಡುಗೆಗಳೊಂದಿಗೆ ಮೇಳ ಏರ್ಪಡಿಸಲಾಗಿದೆ.

ಮೇಳದಲ್ಲಿ ಟ್ರಾೃಕ್ ಮ್ಯೂಸಿಕ್ ಏರ್ಪಡಿಸಲಾಗಿದೆ. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕುಟುಂಬ ಸಮೇತರಾಗಿ ಬಂದು ರಜಾ ದಿನವನ್ನು ಇಲ್ಲಿ ಕಳೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಆಗಮಿಸಿ ಇದರ ಸದುಪಯೋಗ ಪಡೆಯಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…