7ರಂದು ರಾಜ್ಯ ಮಟ್ಟದ 45ನೇ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟ- ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜನೆ

blank

 

ಮಂಗಳೂರು: ಕದ್ರಿ ಹಿಲ್ಸ್‌ನ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ (ಕೆಪಿಟಿ) ಸಂಸ್ಥೆಯ ವತಿಯಿಂದ ರಾಜ್ಯ ಮಟ್ಟದ 45ನೇ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟ, ಅಮೃತ ಮಹೋತ್ಸವ ಭವನದ ಶಿಲಾನ್ಯಾಸ, ಹಳೇ ವಿದ್ಯಾರ್ಥಿ ಸಂಘದ ಕೊಡುಗೆಯಾದ ನೂತನ ವಿದ್ಯಾರ್ಥಿ ನಿಲಯ ಹಾಗೂ ಶೈಕ್ಷಣಿಯ ಸ್ವಾಯತ್ತತೆಯ ಉದ್ಘಾಟನಾ ಸಮಾರಂಭ ಜ.7 ರಂದು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕ್ರೀಡೋತ್ಸವ ಉದ್ಘಾಟನೆಗೈಯಲಿದ್ದಾರೆ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಕ್ರೀಡಾ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಉಪಸ್ಥಿತರಿರಲಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್., ನಿರ್ದೇಶಕ ಪ್ರಸನ್ನ ಎಚ್. ಸಹಿತ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಟಿ ಪ್ರಾಂಶುಪಾಲ ಹರೀಶ್ ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

75 ವರ್ಷಗಳಿಗಿಂತಲೂ ಅಧಿಕ ಐತಿಹ್ಯ ಹೊಂದಿದ ಕೆ.ಪಿ.ಟಿ ಸಂಸ್ಥೆಯು ತನ್ನ ಸುಂದರ ಪಯಣದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಕ್ರೀಡೆ ಹಾಗೂ ಸಾಮಾಜಿಕ ವಲಯಗಳಲ್ಲಿ ಅದ್ಭುತ ಸಾಧನೆಗೈದಿದೆ. ಕೆ.ಪಿ.ಟಿ ಸಂಸ್ಥೆಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು 2025 ನೇ ಸಾಲಿನಿಂದ ಶೈಕ್ಷಣಿಕ ಸ್ವಾಯತ್ತತೆಗೆ ಅನುಮತಿ ನೀಡಿದ್ದು, ಇಡೀ ದೇಶದಲ್ಲಿ ಎಐಸಿಟಿಇ ಇಂದ ಸ್ವಾಯತ್ತತೆ ದೊರೆತ ಪ್ರಥಮ ಪಾಲಿಟೆಕ್ನಿಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

2000ಕ್ಕೂ ಅಧಿಕ ವಿದ್ಯಾರ್ಥಿಗಳು
ತಾಂತ್ರಿಕ ಶಿಕ್ಷಣ ವಿಭಾಗದ ಜಂಟಿ ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಕ್ರೀಡಾಕೂಟದಲ್ಲಿ ರಾಜ್ಯಾದ್ಯಂತ 200ಕ್ಕೂ ಹೆಚ್ಚಿನ ಪಾಲಿಟೆಕ್ನಿಕ್‌ಗಳಿಂದ 2,000 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಜ.6 ರಂದು ಕ್ರೀಡಾಪಟುಗಳ ನೋಂದಣಿ ಮತ್ತು ವರದಿ ಪ್ರಕ್ರಿಯೆ ಇದ್ದು, ಜ.7 ಹಾಗೂ 8 ರಂದು ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ 18 ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜ.8 ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ವಿಜೇತ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಮತ್ತು ಬಹುಮಾನ ವಿತರಿಸಲಾಗುತ್ತದೆ ಎಂದರು.

ಹಳೇ ವಿದ್ಯಾರ್ಥಿ ಅಸೋಸಿಯೇಶನ್ ಅಧ್ಯಕ್ಷ ದೇವಾನಂದ್ ಅವರು ಮಾತನಾಡಿ, ಅಮೃತ ಮಹೋತ್ಸವದ ನೆನಪಿನ ಹಿನ್ನಲೆಯಲ್ಲಿ ಸಂಸ್ಥೆಯ ಹಳೇ ವಿದ್ಯಾರ್ಥಿ ಸಂಘವು ನೂತನ ಸಭಾಂಗಣವನ್ನು ಕೊಡುಗೆಯಾಗಿ ನೀಡುತ್ತಿದ್ದು, ಈ ಭವನದ ಶಿಲಾನ್ಯಾಸ ಕಾರ್ಯಕ್ರಮವು ಇದೇ ವೇಳೆ ನೆರವೇರಲಿದೆ. ಜೊತೆಯಲ್ಲಿ ಗುಂಡಳಿಕೆಯಲ್ಲಿ ನಿರ್ಮಾಣಗೊಂಡಿರುವ ನಮ್ಮ ಸಂಸ್ಥೆಯ ನೂತನ ವಿದ್ಯಾರ್ಥಿನಿಲಯದ ಉದ್ಘಾಟನೆ, ಅಮೃತಯಾನ ಸ್ಮರಣ ಸಂಚಿಕೆ ಬಿಡುಗಡೆಯಾಗಲಿದೆ ಎಂದು ವಿವರಿಸಿದರು.

ಸಂಸ್ಥೆಯ ರಿಜಿಸ್ಟ್ರಾರ್ ವಿನೋದ ಕುಮಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಪಿ., ಕ್ರೀಡಾ ಸಮನ್ವಯಾಧಿಕಾರಿ ವಿಶ್ವನಾಥ ಮಾನೆ ಇದ್ದರು.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…