blank

ಬಾಯಿ ಕ್ಯಾನ್ಸರ್ ಗುಣಪಡಿಸುವ ರೋಗ ಮಾಹಿತಿ ಶಿಬಿರದಲ್ಲಿ ಡಾ.ಮುರಲೀ ಮೋಹನ್ ಚೂಂತಾರು

blank

 

ಮಂಗಳೂರು: ಬಾಯಿ ಕ್ಯಾನ್ಸರ್ ಬಂದಾಗ ಸಕಾಲದಲ್ಲಿ ಚಿಕಿತ್ಸೆ ನೀಡಿದರೆ ಸಂಪೂರ್ಣ ಗುಣಪಡಿಸಬಹುದು ಎಂದು ಬಾಯಿ ಮುಖ ದವಡೆ ಶಸ್ತ್ರ ಚಿಕಿತ್ಸಕ ಡಾ. ಮುರಲೀ ಮೋಹನ್ ಚೂಂತಾರು ಹೇಳಿದರು.
ಹೊಸಂಗಡಿಯ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಮತ್ತು ಸುರಕ್ಷಾ ದಂತ ಚಿಕಿತ್ಸಾಲಯದ ಜಂಟಿ ಆಶ್ರಯದಲ್ಲಿ ಮಂಗಳವಾರ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬಾಯಿ ಕ್ಯಾನ್ಸರ್ ಮಾಹಿತಿ ಮತ್ತು ತಪಾಸಣಾ ಶಿಬಿರ ಜರುಗಿತು.

ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಒಂದು ವೇಳೆ ಬಾಯಿ ಕ್ಯಾನ್ಸರ್ ಬಂದರೂ ಸ್ಟೇಜ್ ಒಂದು ಮತ್ತು ಸ್ಟೇಜ್ ಎರಡರಲ್ಲಿ ಗುರುತಿಸಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆದಲ್ಲಿ ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದೆ ಎಂದರು.

ದಂತವೈದ್ಯೆ ಡಾ. ರಾಜಶ್ರೀ ಮೋಹನ್, ದಂತ ಪರಿಚಾರಿಕೆಯರಾದ ರಮ್ಯಾ,ಚೈತ್ರ,ಸುಶ್ಮಿತಾ ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. ಸುಮಾರು 50 ಮಂದಿ ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದರು. ಡಾ.ಮುರಲೀ ಮೋಹನ್ ಚೂಂತಾರು ಅವರು ಬರೆದ ಅರಿವು ಬಾಯಿ ಕ್ಯಾನ್ಸರ್ ಮಾರ್ಗದರ್ಶನ ಪುಸ್ತಕ ಮತ್ತು ಬಾಯಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕರ ಪತ್ರವನ್ನು ಹಂಚಲಾಯಿತು.

Share This Article

ಕಲ್ಲಂಗಡಿಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಯಾವುದೇ ಕಾರಣಕ್ಕೂ ಇಷ್ಟು ಹೊತ್ತು ಇಡಲೇಬೇಡಿ, ಅಪಾಯ ಫಿಕ್ಸ್​! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…