ರಂಗಮಂದಿರ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಉಸ್ತುವಾರಿ ಸಚಿವರ ಸೂಚನೆ

blank

 

ಮಂಗಳೂರು: ನಗರದ ಬೋಂದೆಲ್‌ನಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಬುಧವಾರ ರಂಗಮಂದಿರ ನಿರ್ಮಾಣ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಂಗಮಂದಿರ ನಿರ್ಮಾಣಕ್ಕಾಗಿ 9.95 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿ ಸರ್ಕಾರದಿಂದ ಅನುಮೋದನೆ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರದ ಅನುಮೋದನೆ ನಂತರ ಮಂಗಳೂರು ಮಹಾನಗರಪಾಲಿಕೆಯು ಕಾಮಗಾರಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಚಿವರು ತಿಳಿಸಿದರು. ರಂಗಮಂದಿರ ಯೋಜನೆಯ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಯೋಜನೆಯ ವಿನ್ಯಾಸದ ಕುರಿತು ಚರ್ಚಿಸಿದರು. ಸಂಪೂರ್ಣ ಸುಸಜ್ಜಿತವಾದ ರಂಗಮಂದಿರ ನಿರ್ಮಾಣವಾಗಬೇಕಿದ್ದು, ಯಾವುದೇ ಕೊರತೆ ಇಲ್ಲದಂತೆ ಪೂರ್ಣಗೊಳಿಸಬೇಕು. ಕಲಾ ಚಟುವಟಿಕೆಗಳಿಗೆ ಪೂರಕವಾದ ವಿನ್ಯಾಸ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಕಾಮಗಾರಿ ನಡೆಸಬೇಕು ಎಂದು ದಿನೇಶ್ ಗುಂಡೂರಾವ್ ಸೂಚಿಸಿದರು.

ಲಭ್ಯವಿರುವ 9.95 ಕೋಟಿ ರೂ. ಅನುದಾನವನ್ನು ಬಳಸಿಕೊಂಡು ರಂಗಮಂದಿರವನ್ನು ಪೂರ್ಣಗೊಳಿಸಬೇಕು. ಮುಂದಿನ ಆಂತರಿಕ ವಿನ್ಯಾಸ, ಧ್ವನಿ ಬೆಳಕು ಹಾಗೂ ಇತರ ಅಂತಿಮ ಕಾರ್ಯಗಳಿಗೆ ಬೇಕಾಗುವ ಹೆಚ್ಚುವರಿ ಅನುದಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಗಳು ಬಿಡುಗಡೆ ಮಾಡಲು ಅಗತ್ಯ ಕ್ರಮ ವಹಿಸುವಂತೆ ಉಸ್ತುವಾರಿ ಸಚಿವರು ತಿಳಿಸಿದರು.

ನಗರದ ಬೋಂದೆಲ್‌ನ ಈ ಜಾಗವು ರಂಗಮಂದಿರ ನಿರ್ಮಾಣಕ್ಕೆ ಸೂಕ್ತವಾಗಿರುವುದರಿಂದ ಇದಕ್ಕೆ ಸಂಪರ್ಕ ರಸ್ತೆ ಹಾಗೂ ಇತರ ಮೂಲಸೌಕರ್ಯಗಳನ್ನು ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆ ಉಸ್ತುವಾರಿ ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಎಂ.ಪಿ. ಅವರು ರಂಗಮಂದಿರದ ಯೋಜನೆ ಕುರಿತು ಸಚಿವರಿಗೆ ಮಾಹಿತಿ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ., ಜಿಲ್ಲಾ ವಾರ್ತಾಧಿಕಾರಿ ಬಿ. ಎ. ಖಾದರ್ ಶಾ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…