ವಿವಿಧ ಸಂಸ್ಕೃತಿಯನ್ನು ಬೆಸೆಯುವ ಭಾಷೆ ಹಿಂದಿ, ಹಿಂದಿ ಯುವ ಬರಹಗಾರರ ಶಿಬಿರ ಉದ್ಘಾಟಿಸಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ

blank

ಮಂಗಳೂರು: ಭಾರತದಲ್ಲಿ ನೂರಾರು ಸಂಸ್ಕೃತಿಗಳಿದ್ದು, ಹಿಂದಿ ಭಾಷೆಯಿ ವಿವಿಧ ಸಂಸ್ಕೃತಿಯನ್ನು ಬೆಸೆಯುವ ಭಾಷೆಯಾಗಿದೆ. ಈ ಕಾರಣಕ್ಕಾಗಿ ಹಿಂದಿ ಭಾರತದ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಪಡೆದುಕೊಂಡಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಹೇಳಿದರು.

blank

ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯದ ಹಿಂದಿ ಸ್ನಾತಕೋತ್ತರ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಐದು ದಿನಗಳ ವಿಶೇಷ ಹಿಂದಿ ಯುವ ಬರಹಗಾರರ ಶಿಬಿರವನ್ನು ಸೋಮವಾರ ಹಂಪನಕಟ್ಟೆ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.

ಭಾಷೆ ಕೇವಲ ಒಂದು ಸಂವಹನ ಮಾಧ್ಯಮವಾಗಿರದೆ ದೇಶದ ಸಂಸ್ಕೃತಿ, ಭವಿಷ್ಯವನ್ನು ಉಳಿಸುವ ಪ್ರಮುಖ ಸಾಧನವೂ ಆಗಿದೆ. ಸಂಪತ್ತು, ಅಧಿಕಾರ ಎಲ್ಲವೂ ಇದ್ದು ಮಾತನಾಡುವ ಭಾಷೆ ಚೆನ್ನಾಗಿರದಿದ್ದರೆ ಆತ ಸಾಮಾನಜಿಕವಾಗಿ ಉತ್ತಮ ವ್ಯಕ್ತಿಯಾಗಲು ಸಾಧ್ಯವಿಲ್ಲ. ಯುವ ಬರಹಗಾರರು ಮುಖ್ಯವಾಗಿ ಭಾಷೆ, ಪದಗಳ ಕುರಿತಾಗಿ ಹೆಚ್ಚಿನ ಜ್ಞಾನವನ್ನು ಹೊಂದಿರಬೇಕು ಎಂದರು.

ಕೇಂದ್ರೀಯ ಹಿಂದಿ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಸುನಿಲ್ ಬಾಬುರಾವ್ ಕುಲಕರ್ಣಿ ಆನ್‌ಲೈನ್ ವೇದಿಕೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳನ್ನು ಲೇಖಕರನ್ನಾಗಿ ಪ್ರೇರೇಪಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ. ಲೇಖನದ ವಸ್ತು, ವಿಷಯಗಳು, ನಮ್ಮ ಸಂಸ್ಕೃತಿ-ಪರಂಪರೆ ವಿಚಾರವಾಗಿ ಲೇಖನಗಳಲ್ಲಿ ಅಳವಡಿಸುವುದು ಹೇಗೆ ಎನ್ನುವುದನ್ನು ತಿಳಿಸಿ, ಅವರನ್ನು ಪರಿಪಕ್ವರನ್ನಾಗಿ ಮಾಡಲಾಗುತ್ತದೆ. ಸೃಜನಾತ್ಮತೆಗೆ ಪ್ರೋತ್ಸಾಹ ನೀಡುವುದು ಶಿಬಿರದ ಮುಖ್ಯ ಉದ್ದೇಶ ಎಂದರು.

ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರು ಅಧ್ಯಕ್ಷತೆ ವಹಿಸಿದ್ದರು.

ಕೇಂದ್ರೀಯ ಹಿಂದಿ ನಿರ್ದೇಶನಾಲಯದ ಪ್ರಮುಖರಾದ ಡಾ. ಪ್ರದೀಪ್ ಕುಮಾರ್ ಠಾಕೂರ್, ಐಕ್ಯೂಎಸಿ ಸಂಯೋಜಕ ಡಾ. ಸಿದ್ದರಾಜು ಉಪಸ್ಥಿತರಿದ್ದರು. ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್ ಸ್ವಾಗತಿಸಿದರು. ಹಿಂದಿ ಉಪನ್ಯಾಸಕಿ ಡಾ. ಸುಮಾ ಟಿ. ರೋಡನ್ನವರ್ ಕಾರ್ಯಕ್ರಮ ನಿರೂಪಿಸಿದರು.

——————-

ಐದು ದಿನ ಹಿಂದಿ ಬರಹಗಾರರ ಶಿಬಿರ

ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರ್ಕಾರ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಆಯೋಜಿಸಿದ್ದು, ಈ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ್ ಪುಣೆ, ಡಾ. ಪ್ರತಿಭಾ ಮೊದಲಿಯಾರ್ ಮೈಸೂರು, ಪ್ರೊ. ಪ್ರಭಾ ವಿ. ಭಟ್ ಧಾರವಾಡ, ಡಾ. ಸುಮಂಗಲಾ ಮಾಮ್ಮಿಗಟ್ಟಿ ಧಾರವಾಡ, ಡಾ. ಮಂಜುನಾಥ ಐಕಳ ಮಂಗಳೂರು, ಡಾ. ಮುಕುಂದ ಪ್ರಭು ಮಂಗಳೂರು, ಡಾ. ಸುಮಾ ಟಿ. ರೋಡನ್ನವರ್ ಮಂಗಳೂರು ಭಾಗವಹಿಸಲಿದ್ದಾರೆ. ವಿವಿ ವ್ಯಾಪ್ತಿಯ 10 ಕಾಲೇಜಿನ 23 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 50 ವಿದ್ಯಾರ್ಥಿಗಳು ಶಿಬಿರದಲ್ಲಿ ಬಾಗವಹಿಸಿದ್ದರು.

Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…