More

    ಮಂಗಳೂರು ವಿವಿಯಲ್ಲಿ ಹಿಜಾಬ್​ ವಿವಾದ ಸೃಷ್ಟಿಸಿದ ವಿದ್ಯಾರ್ಥಿನಿಯರಿಗೆ ನೊಟೀಸ್​ ಜಾರಿ: ಮತ್ತೆ ನಿಯಮ ಮೀರಿದರೆ ಅಮಾನತು ಎಚ್ಚರಿಕೆ

    ಮಂಗಳೂರು: ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರಿಗೆ ವಿವಿಯಿಂದ ನೊಟೀಸ್​ ಜಾರಿಯಾಗಿದೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿ.ವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ನೋಟೀಸ್ ಜಾರಿ ಮಾಡಿದ್ದಾರೆ.

    ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಗಡುವು ನೀಡಿದ ಬೆನ್ನಲ್ಲೇ ಇಂದು ನೊಟೀಸ್​ ನೀಡಿ ಎಚ್ಚರಿಕೆ ನೀಡಿದ್ದಾರೆ. ಬಾಹ್ಯಶಕ್ತಿಗಳ ಜೊತೆಗೂಡಿ ಪತ್ರಿಕಾಗೋಷ್ಠಿ ನಡೆಸಿದ್ದೀರಿ, ಕಾಲೇಜಿನ ವಿರುದ್ದವಾಗಿ,ಪ್ರಾಂಶುಪಾಲರ ವಿರುದ್ಧ ಕೆಲ ಹೇಳಿಕೆ ನೀಡಿ, ಈ ರೀತಿಯ ಹೇಳಿಕೆ ನೀಡಿ ಕಾಲೇಜಿನ ಘನತೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ನೊಟೀಸ್​​ನಲ್ಲಿ ಹೇಳಲಾಗಿದೆ.

    ಈ ರೀತಿಯ ವರ್ತನೆ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದೂ ಪ್ರಶ್ನಿಸಲಾಗಿದ್ದು, ಈ ಬಗ್ಗೆ ಸಮಜಾಯಿಷಿ ಮೂರು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದಾರೆ.

    ಹಿಜಾಬ್ ವಿದ್ಯಾರ್ಥಿನಿ ಗೌಸಿಯಾ ಸೇರಿ ಇತರ ವಿದ್ಯಾರ್ಥಿನಿಯರಿಗೆ ನೋಟೀಸ್ ನೀಡಲಾಗಿದ್ದು, ಮೊದಲ ಹಂತವಾಗಿ ನೊಟೀಸ್​ ನೀಡಲಾಗಿದೆ. ಈ ಬಳಿಕವೂ ನಿಯಮ ಮೀರಿದರೆ ಕಾಲೇಜಿನಿಂದ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts