ಮಂಗಳೂರು: ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ.
ಅನಾಮಿಕ ಕರೆ ಮಾಡಿ ಏರ್ಪೋರ್ಟ್ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಐಎಸ್ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸೇರಿ ಏರ್ಪೋರ್ಟ್ನಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.
ಇದನ್ನೂ ಓದಿ: ಕಾರ್ ಬೇಕು ಅಂತ ಅಭಿಮಾನಿ ಕೇಳಿದ್ದಿಕ್ಕೆ ಸೋನು ಕೊಟ್ಟ ಉತ್ತರ ಇದು …
ಮಧ್ಯಾಹ್ನದ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆಗೆ ಏರ್ಪೋರ್ಟ್ ಅಧಿಕಾರಿಗಳು ದೂರು ನೀಡಿದ್ದಾರೆ. ಯಾರೋ ಕಿಡಿಗೇಡಿಗಳು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರಬಹುದೆಂದು ಶಂಕಿಸಲಾಗಿದೆ. (ದಿಗ್ವಿಜಯ ನ್ಯೂಸ್)
ಮಗಳು ಬೇರೊಬ್ಬನ ಜತೆ ಹೋದಾಗ, ರಾಮ್ ಚರಣ್ ಚಿತ್ರ ಸೋತಾಗ ಆತ್ಮಹತ್ಯೆಗೆ ನಿರ್ಧರಿಸಿದ್ದೆ