ಮಂಗಳೂರು: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ಮೃತಪಟ್ಟ ಘಟನೆ ಮಂಗಳೂರು ತಾಲೂಕಿನ ಕಟೀಲಿನಲ್ಲಿ ನಡೆದಿದೆ.
ಕಟೀಲು ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು ( 58) ಮೃತ ಕಲಾವಿದ. ಕಟೀಲಿನ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಶಿಶುಪಾಲನ ಪಾತ್ರದಾರಿ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು.
ವೇದಿಕೆ ಮೇಲೆಯೇ ಹೃದಯಾಘಾತವಾಗಿ ಕುಸಿದು ಬಿದ್ದ ಬಾಯಾರು ಅವರನ್ನು ಕೂಡಲೇ ಅಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬಯಾರು ಅವರ ಅಕಾಲಿಕ ಮರಣ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. (ದಿಗ್ವಿಜಯ ನ್ಯೂಸ್)
ಸಿನಿಮಾ ಹಾಡಿಗೆ ಸಖತ್ ಹಾಟ್ ಆಗಿ ಸೊಂಟ ಬಳುಕಿಸಿದ ಲೇಡಿ ಕಾನ್ಸ್ಟೇಬಲ್ಸ್ಗೆ ಎದುರಾಯ್ತು ಸಂಕಷ್ಟ!
ನನ್ನ ಗುರಿ ಏನಿದ್ರು ರೆಸ್ಟ್ ಆಫ್ ದಿ ವರ್ಲ್ಡ್ ಎಂದು ಗುಡುಗಿದ ರಾಕಿ ಭಾಯ್: ಜಗತ್ತು ಗೆಲ್ಲಲು ಹೊರಟ ಯಶ್
ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ. ದೇಣಿಗೆ: ಮೊದಲ ದಿನವೇ ಗಂಗಾವತಿ ಮಾಜಿ-ಹಾಲಿ ಶಾಸಕರಿಗೆ ಜನಾರ್ದನ ರೆಡ್ಡಿ ಶಾಕ್