ಮಂಗಳೂರು: ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ನ ಹಮಾಸ್ ಉಗ್ರರು 5 ಸಾವಿರ ರಾಕೆಟ್ಗಳಿಂದ ದಾಳಿ ಮಾಡಿದ್ದನ್ನು ಖಂಡಿಸಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಮಂಗಳೂರು ಮೂಲದ ವೈದ್ಯನನ್ನು ಬಹರೇನ್ ಪೊಲೀಸರು ಬಂಧಿಸಿದ್ದಾರೆ.
ಡಾ. ಸುನೀಲ್ ರಾವ್, ಬಂಧನಕ್ಕೆ ಒಳಗಾದ ವೈದ್ಯ. ಸೈಬರ್ ಅಪರಾಧವೆಂದು ಪರಿಗಣಿಸಿ ಸುನೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸುನೀಲ್ ಕ್ಷಮೆ ಸಹ ಕೋರಿದ್ದರು. ನಾನು ಈ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸುತ್ತೇನೆ. ಪ್ರಸ್ತುತ ಸಂದರ್ಭದಲ್ಲಿ ಇದೊಂದು ಸೂಕ್ಷ್ಮ ವಿಚಾರ. ಓರ್ವ ವೈದ್ಯನಾಗಿ ಎಲ್ಲ ಜೀವಗಳು ತುಂಬಾ ಮುಖ್ಯ. ನಾನು ಈ ದೇಶವನ್ನು ಮತ್ತು ಇಲ್ಲಿನ ಜನರನ್ನು ಹಾಗೂ ಧರ್ಮವನ್ನು ತುಂಬಾ ಗೌರವಿಸುತ್ತೇ. ಕಳೆದ 10 ವರ್ಷಗಳಿಂದ ನಾನಿಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ ಎಂದು ಸುನೀಲ್ ಹೇಳಿದ್ದಾರೆ.
I would like to apologized about the statement that I posted on this platform.
It was insensitive in the context of the current event. As a doctor all lives matter. I respect this country its people and its religion deeply as I have been here for past 10 years.
كلماتي و افعالي— SUNIL J RAO (@shilpasunil_rao) October 19, 2023
ಕ್ಷಮೆಯಾಚನೆ ಮಾಡಿದರೂ ಸುನೀಲ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದಿಷ್ಟೇ ಅಲ್ಲದೆ, ಆಸ್ಪತ್ರೆಯ ಕೆಲಸದಿಂದಲೂ ಸುನೀಲ್ ಅವರನ್ನು ವಜಾಗೊಳಿಸಲಾಗಿದೆ. ಸುನೀಲ್ ಅವರು ರಾಯಲ್ ಬಹರೇನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆಸ್ಪತ್ರೆಯ ಮಂಡಳಿ, ನಮ್ಮ ಆಸ್ಪತ್ರೆಯಲ್ಲಿ ಇಂಟರ್ನಲ್ ಮೆಡಿಸಿನ್ನಲ್ಲಿ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸುನೀಲ್ ರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ನಮ್ಮ ಸಮಾಜಕ್ಕೆ ಆಕ್ಷೇಪಾರ್ಹವಾಗಿದೆ. ಅವರ ಪೋಸ್ಟ್ಗಳು ಮತ್ತು ಸಿದ್ಧಾಂತಗಳು ವೈಯಕ್ತಿಕವಾಗಿದ್ದು, ಆಸ್ಪತ್ರೆಯ ಅಭಿಪ್ರಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂಬುದನ್ನು ನಾವು ಖಚಿತಪಡಿಸಲು ಬಯಸುತ್ತೇವೆ. ಇದು ನಮ್ಮ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಸುನೀಲ್ ವಿರುದ್ಧ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಸುನೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
— RoyalBahrainHospital (@RBHospital) October 19, 2023
ಅಕ್ಟೋಬರ್ 7ರಂದು ಮುಂಜಾನೆ ಹಮಾಸ್ ಉಗ್ರರು 5000 ರಾಕೆಟ್ಗಳಿಂದ ಇಸ್ರೇಲ್ ಮೇಲೆ ದಿಢೀರ್ ದಾಳಿ ಮಾಡಿದರು. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಹಮಾಸ್ ಉಗ್ರರ ಮೇಲೆ ದಾಳಿ ನಡೆಸಿದ್ದು, ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧ ಎರಡು ವಾರಗಳನ್ನು ಪೂರೈಸುತ್ತಿದೆ. ಆದರೂ, ಕದನ ಕಾರ್ಮೋಡ ಮಾತ್ರ ತಿಳಿಯಾಗಿಲ್ಲ. ಸದ್ಯ ಎರಡೂ ಕಡೆಗಳಿಂದ 4 ಸಾವಿರಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ.
ಇಸ್ರೇಲ್- ಪ್ಯಾಲೆಸ್ತೀನ್ ವಿವಾದವೇನು?
ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಸುಮಾರು ನೂರು ವರ್ಷಗಳಿಂದ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಪಟ್ಟಿ ಮತ್ತು ಗೋಲನ್ ಹೈಟ್ಸ್ ಇನ್ನಿತರ ಪ್ರದೇಶಗಳ ಮೇಲಿನ ಹಕ್ಕಿನ ಬಗ್ಗೆ ಎರಡೂ ದೇಶಗಳ ನಡುವೆ ವಿವಾದ ಇದೆ. ಪೂರ್ವ ಜೆರುಸಲೆಮ್ ಸೇರಿ ಈ ಪ್ರದೇಶಗಳನ್ನು ಪ್ಯಾಲೆಸ್ತೀನ್ ತನ್ನದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಇಸ್ರೇಲ್ ಜೆರುಸಲೆಮ್ ಮೇಲಿನ ಹಕ್ಕನ್ನು ಸಾಧಿಸುತ್ತಿದೆ.
ಗಾಜಾ ಪಟ್ಟಿ ಎಂದರೇನು? : ಗಾಜಾ ಪಟ್ಟಿ ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಇದೆ. ಈ ಸ್ಥಳವು ಪ್ರಸ್ತುತ ಹಮಾಸ್ ಉಗ್ರರ ನಿಯಂತ್ರಣದಲ್ಲಿದೆ. ಹಮಾಸ್ ಎಂಬುದು ಇದು ಇಸ್ರೇಲ್ ವಿರೋಧಿ ಗುಂಪು. ಸೆಪ್ಟೆಂಬರ್ 2005 ರಲ್ಲಿ ಇಸ್ರೇಲ್, ಗಾಜಾ ಪಟ್ಟಿಯಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡಿತು. ನಂತರ ಈ ಪ್ರದೇಶದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತು. ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯವನ್ನು ಸ್ಥಾಪಿಸಬೇಕು ಎಂದು ಪ್ಯಾಲೆಸ್ತೀನ್ ಹೋರಾಟ ನಡೆಸುತ್ತಿದೆ. (ಏಜೆನ್ಸೀಸ್)
ಹಮಾಸ್, ರಷ್ಯಾ ವಿರುದ್ಧ ಜೋ ಬೈಡೆನ್ ವಾಗ್ದಾಳಿ: ಗೆಲ್ಲಲು ಬಿಡುವುದಿಲ್ಲ ಎಂದು ಸಂಕಲ್ಪ
‘ಉದ್ಯೋಗಿಗಳ ಸುರಕ್ಷತೆ ಮುಖ್ಯ’… ತಾತ್ಕಲಿಕವಾಗಿ ಇಸ್ರೇಲ್ನಲ್ಲಿ ವ್ಯವಹಾರ ಮುಚ್ಚಿದ ಪ್ರಪಂಚದ ಈ ದೊಡ್ಡ ಕಂಪನಿ