More

    ಡಾ.ಡಿ.ವೀರೇಂದ್ರ ಹೆಗ್ಗಡೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಗೆ

    ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ದಕ್ಷಿಣ ಭಾರತದ ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಚಲನಚಿತ್ರ ಸಂಗೀತ ನಿರ್ದೇಶಕ ಇಳಯರಾಜ, ಒಲಿಂಪಿಯನ್ ಅಥ್ಲೀಟ್ ಪಿ.ಟಿ. ಉಷಾ ಹಾಗೂ ಚಲನಚಿತ್ರ ಕಥೆಗಾರ ವಿ.ವಿಜಯೇಂದ್ರ ಪ್ರಸಾದ್ ಅವರನ್ನು ಜುಲೈ 6ರಂದು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು. ಸೋಮವಾರ ಸಂಸತ್ ಅಧಿವೇಶನ ಆರಂಭಗೊಂಡಿದ್ದು, ಗುರುವಾರ ವೀರೇಂದ್ರ ಹೆಗ್ಗಡೆಯವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಹೆಗ್ಗಡೆಯವರು ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

    ಅವರನ್ನು ವಿಮಾನ ನಿಲ್ದಾಣದಲ್ಲಿ ಸಂಸದ ತೇಜಸ್ವಿ ಸೂರ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಾರ್ಯದರ್ಶಿಗಳಾದ ಗಣೇಶ್ ಗೌಡ ನಾವೂರ, ಶ್ರೀನಿವಾಸ್ ರಾವ್ ಧರ್ಮಸ್ಥಳ ಮತ್ತಿತರರು ಸ್ವಾಗತಿಸಿದರು.

    ಅಭಿನಂದನೆಗಳ ಮಹಾಪೂರ: ನಾಮನಿರ್ದೇಶನಗೊಂಡ ವೇಳೆ ಹೆಗ್ಗಡೆಯವರು ಬೆಂಗಳೂರು ಪ್ರವಾಸದಲ್ಲಿದ್ದರು. ಜುಲೈ 9ರಂದು ಅವರು ಧರ್ಮಸ್ಥಳಕ್ಕೆ ಆಗಮಿಸಿದಾಗ, ಚಾರ್ಮಾಡಿ ಘಾಟಿಯಿಂದಲೇ ಭವ್ಯ ಸ್ವಾಗತ ಕೋರಲಾಯಿತು. ಅದರ ನಂತರ ಪ್ರತಿದಿನವೂ ಅಭಿಮಾನಿಗಳು, ಭಕ್ತರು, ಗಣ್ಯರು ಭೇಟಿ ನೀಡಿ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಬುಧವಾರದವರೆಗೆ ಸಹಸ್ರಾರು ಮಂದಿ ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ. ಇನ್ನು ಕೆಲದಿನ ಹೆಗ್ಗಡೆಯವರು ದೆಹಲಿಯಲ್ಲಿ ಇರುವುದರಿಂದ ಭೇಟಿ ಸಾಧ್ಯವಾಗುವುದಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts