More

    ಕೇರಳದಲ್ಲಿ ಸಂಪೂರ್ಣ ಬಂದ್​ ಆಚರಣೆ: ಮಂಗಳೂರು-ಕಾಸರಗೋಡು ಬಸ್ ಸಂಚಾರ ಸಂಪೂರ್ಣ ಸ್ಥಗಿತ

    ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ರಾಷ್ಟ್ರವ್ಯಾಪಿ ವಿವಿಧ ಕಾರ್ಮಿಕ ಸಂಘಟನೆಗಳು ಬೀದಿಗಿಳಿದಿದ್ದು, ನೆರೆ ರಾಜ್ಯ ಕೇರಳದಲ್ಲಿ ಸಂಪೂರ್ಣ ಬಂದ್​ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕೇರಳಕ್ಕೆ ಹೋಗುವ ಬಸ್​ಗಳನ್ನು ಬಂದ್​ ಮಾಡಲಾಗಿದೆ.

    ಮಂಗಳೂರಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಿಂದ ಹೊರಡುವ ಬಸ್​ಗಳನ್ನು ಸ್ಥಗಿತಗೊಳಿಸಲಾಗಿದೆ. ಮಂಗಳೂರು-ಕಾಸರಗೋಡು ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರಿಗೆ ಯಾವುದೇ ಕೇರಳ ಸಾರಿಗೆ ಬಸ್​ಗಳು ಆಗಮಿಸುತ್ತಿಲ್ಲ.

    ಉಳಿದಂತೆ ಮಂಗಳೂರಿನಲ್ಲೂ ಭಾರತ್​ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್​ ಸಂಚಾರ ಆರಂಭವಾಗಿದೆ. ಜನಜೀವನವು ಸಾಗುತ್ತಿದ್ದು, ವ್ಯಾಪಾರ ವಹಿವಾಡುಗಳು ನಡೆಯುತ್ತಿವೆ. ಆದರೆ, ಬಂದ್​ ಭೀತಿಯಿಂದ ದೂರದ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್​ ಬಂದೋಬಸ್ತ್​ ಕಲ್ಪಿಸಲಾಗಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts