ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ, ಹಣಕ್ಕಾಗಿ ಬೆದರಿಕೆ ಹಾಕಿರುವ ಆರೋಪ ಶಿಕ್ಷಕರೊಬ್ಬರ ವಿರುದ್ಧ ಕೇಳಿಬಂದಿದೆ. ಈ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಶಿಕ್ಷಕ ಗುರುರಾಜ್ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಕಾಮುಕ ಶಿಕ್ಷಕ ಗುರುರಾಜ್ ಕೃತ್ಯಕ್ಕೆ ಆತನ ಪತ್ನಿ ರಾಜೇಶ್ವರಿ ಕೂಡ ಸಾಥ್ ನೀಡಿರುವ ಆರೋಪವಿದೆ.
ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಗುರುರಾಜ್ ಅತ್ಯಾಚಾರ ಮಾಡಿದ್ದಾರೆಂದು ದೂರಲಾಗಿದೆ. ಅಲ್ಲದೆ, ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಗುರುರಾಜ್ ಮತ್ತು ಆತನ ಪತ್ನಿ ಫೋಟೋ ತೆಗೆಯುತ್ತಿದ್ದರು ಹಾಗೂ ಅದನ್ನು ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಸುತ್ತಿದ್ದರು ಎನ್ನಲಾಗಿದೆ
ವಿದ್ಯಾರ್ಥಿನಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸುಬ್ರಹ್ಮಣ್ಯದ ಪ್ರೌಢಶಾಲಾ ಶಿಕ್ಷಕ ರಾಯಚೂರು ಮೂಲದ ಗುರುರಾಜ್ ಮತ್ತು ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. (ದಿಗ್ವಿಜಯ ನ್ಯೂಸ್)
ಬಿಗ್ ಬಾಸ್ ಫಿನಾಲೆಯಿಂದ ಅರವಿಂದ್ ಕೆಪಿ ಔಟ್!; ಮಂಜು ಪಾವಗಡ, ದಿವ್ಯಾ ಇವರಿಬ್ಬರಲ್ಲಿ ಯಾರು ವಿನ್ನರ್?
ಅಂತಿಮ ಹಂತಕ್ಕೆ ಬಂದ ಕೂಡಲೇ ಬದಲಾಯ್ತ ನಿಮ್ಮ ವರಸೆ?! ಸುದೀಪ್ ವಿರುದ್ಧ ಅರವಿಯಾ ಅಭಿಮಾನಿಗಳು ಗರಂ
ರಾಜೀವ್ ಗಾಂಧಿ ಖೇಲ್ರತ್ನ ಮರುನಾಮಕರಣ: ಒಂದೇ ಏಟಿಗೆ ಮೂರು ಹಕ್ಕಿ ಹೊಡೆದ ಪ್ರಧಾನಿ ಮೋದಿ..!