ಮಂಗಳೂರು: ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ ಅಧಿಕಾರಿಗಳು ಮನೆ ಜಪ್ತಿ ಮಾಡಲು ಬಂದಿದ್ದಕ್ಕೆ ಮನನೊಂದು ಮನೆ ಯಜಮಾನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನ ಹಾರಾಡಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ.
ಪ್ರಾರ್ಥನಾ ಪ್ರಭು (52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಮಹಿಳೆ, ನನ್ನ ಸಾವಿಗೆ ಕೆನರಾ ಬ್ಯಾಂಕ್ ಅಧಿಕಾರಿಗಳ ಮಾನಸಿಕ ಕಿರುಕುಳ ಕಾರಣ ಎಂದು ಆರೋಪಿಸಿದ್ದಾರೆ. ಇದೀಗ ಪ್ರಾರ್ಥನಾ ಪ್ರಭು ಪತಿ, ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ರಘವೀರ್ ವಾಣಿಜ್ಯ ಉದ್ಧೇಶಕ್ಕಾಗಿ ಸಾಲ ಮಾಡಿದ್ದರು. ಸಾಲ ಮರುಪಾವತಿ ಮಾಡುವ ಭರವಸೆ ನೀಡಿದರೂ ಬ್ಯಾಂಕ್ ನಿಂದ ಏಕಾಏಕಿ ಕಾರ್ಯಾಚರಣೆ ನಡೆಸಿದ್ದಾರೆ. ಮನೆಯ ಹಿಂಬದಿಯ ಬೀಗ ಮುರಿದು ಮನೆ ಸೀಜ್ ಮಾಡಲು ಬ್ಯಾಂಕ್ ಸಿಬ್ಬಂದಿ ಬಂದಿದ್ದರು. ಇದರಿಂದ ಮನನೊಂದು ಪಾರ್ಥನಾ ಪ್ರಭು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)
ಮದುವೆಯಾಗಲು ಇಷ್ಟವಿಲ್ಲವೆಂದರೂ ಒತ್ತಾಯ ಮಾಡುತ್ತಿದ್ದೀರಿ… ನನಗೆ ಬೇರೆ ಇಲ್ಲ… ಗುಡ್ಬೈ
ಒಳಉಡುಪಿನಲ್ಲಿರೋ ಫೋಟೋ ಪೋಸ್ಟ್ ಮಾಡಿದ ನಿರ್ದೇಶಕನ ಮಗಳಿಗೆ ಬಿಗ್ ಶಾಕ್..!