More

    ಮಾಂಗಲ್ಯ ಕಿತ್ತು ಪರಾರಿ

    ಹುಬ್ಬಳ್ಳಿ: ಗೋಕುಲ ರಸ್ತೆಯ ರವಿನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕೊರಳಲ್ಲಿದ್ದ 2 ಲಕ್ಷ ರೂ. ಮೌಲ್ಯದ ಮಾಂಗಲ್ಯ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ.
    ಮಂಜು ದರ್ಶಿನಿ ಹತ್ತಿರ ಮಹಿಳೆಯು ನಡೆದುಕೊಂಡು ಹೋಗುತ್ತಿರುವ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು, ಕೊರಳಿಗೆ ಕೈ ಹಾಕಿ 50 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದಾರೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts