More

    ಕುಮಾರಸ್ವಾಮಿಯವರೇ ಇದು ಎಷ್ಟನೇಯ ಸಿಡಿ?: ಸಚಿವ ಸಿ.ಸಿ.ಪಾಟೀಲ್ ಲೇವಡಿ

    ದಾವಣಗೆರೆ: ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಡಿ ಬಿಡುಗಡೆ ಮಾಡಿದರೆ ಉತ್ತರ ನೀಡಲು ಸರ್ಕಾರ ಸಮರ್ಥವಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಹೇಳಿದರು.

    ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅವರದ್ದು ಎಷ್ಟನೇ ಸಿಡಿ?!, ಬಳ್ಳಾರಿಯಲ್ಲಿ ೨೫೦ ಕೋಟಿ ರೂ.ಗಳ ಸಿಡಿ ಮಾಡಿದ್ದನ್ನು ನೀವೇ ನೋಡಿದ್ದೀರಿ ಎಂದು ಲೇವಡಿ ಮಾಡಿದರು

    ಮಂಗಳೂರು ಗಲಭೆಗೆ ಕಾರಣಗಳು ಮಾಧ್ಯಮಗಳಲ್ಲಿ ಬಿತ್ತರವಾಗಿವೆ. ರಾಜ್ಯದ ಇತಿಹಾಸದಲ್ಲಿ ಪೊಲೀಸರು ಕಲ್ಲು ತೂರಾಟ ಮಾಡಿದ ಉದಾಹರಣೆಗಳಿಲ್ಲ. ಪರಿಸ್ಥಿತಿ ಕೈ ಮೀರಿದಾಗ ಲಾಠಿ ಪ್ರಹಾರ ಮಾಡುವುದು ಸಹಜ. ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಅವರ ಪ್ರಾಣ ಉಳಿಸಿಕೊಳ್ಳಲು ಯಾವ ರೀತಿ ಪರದಾಡಿದ್ರು ಎಂಬುದನ್ನು ಮಾಧ್ಯಮಗಳು ಬಿತ್ತರಿಸಿವೆ ಎಂದು ಸಚಿವರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts