ಮಾವು, ಅಡಕೆ ಗಿಡ ಬೆಂಕಿಗಾಹುತಿ

blank

ಹಾನಗಲ್ಲ: ಬೆಂಕಿ ತಗುಲಿ ಐವರು ರೈತರ ಸುಮಾರು 8 ಎಕರೆಯಷ್ಟು ಮಾವು ಹಾಗೂ ಅಡಕೆ ತೋಟ ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಪಟ್ಟಣದ ಆನೆಕೆರೆ ಸಮೀಪ ಅಗ್ನಿ ಅವಘಡ ಸಂಭವಿಸಿದ್ದು, ವಾರ್ಷಿಕ ಸುಮಾರು 8 ಲಕ್ಷ ರೂಪಾಯಿ ಆದಾಯ ತರಬೇಕಿದ್ದ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ಮಾವಿನ ಫಸಲು ಕೈಗೆ ಬರುವುದರಲ್ಲಿತ್ತು. ಗಿಡದ ತುಂಬೆಲ್ಲ ಹೂವು ಬಿಟ್ಟು ಕಾಯಿ ಕಟ್ಟಿದ್ದ ಮಾವಿನ ಗಿಡಗಳು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಮಾವು ಬೆಳೆಗಾರ ರೈತರು ಕಂಗಾಲಾಗಿದ್ದಾರೆ. ಅಗ್ನಿ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಹಾನಗಲ್ಲ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದರಾದರೂ 8 ಎಕರೆ ಪ್ರದೇಶದಲ್ಲಿನ ಮಾವಿನ ಗಿಡಗಳು ಹಾಗೂ ಅಡಕೆ ಗಿಡಗಳು ಸುಟ್ಟಿವೆ. ರೈತರಾದ ಗಂಗಮ್ಮ ಕಂಚಿಗೊಲ್ಲರ, ಕೊಟ್ರೇಶ ಚನ್ನಬಸವ ತೊಪ್ಪಲದ, ಗೌಸ್‌ಮೊಹಿದ್ದೀನ್ ಸರ್ಖಾಜಿ, ತಾಜುದ್ದೀನ್ ಬಾಳೂರ ಇತರರಿಗೆ ಸೇರಿದ್ದ ಮಾವಿನತೋಟ, ಅಡಕೆ ತೋಟಗಳು ಸಂಪೂರ್ಣ ಹಾನಿಗೀಡಾಗಿವೆ.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…