More

    ಖರ್ಗೆ ಕುಟುಂಬಕ್ಕೆ ಬೆದರಿಕೆ ಪ್ರಕರಣ; ಆಡಿಯೋ ನಕಲಿ ಎಂದ ಮಣಿಕಂಠ ರಾಥೋಡ್​

    ಕಲಬುರ್ಗಿ: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್​ ಹಾಗೂ ಬಿಜೆಪಿ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ.

    ಇನ್ನು ರಾಜ್ಯದ ಹೈವೋಲ್ಟೇಜ್​ ಕ್ಷೇತ್ರಗಳಲ್ಲಿ ಒಂದಾದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಮಾಜಿ ಸಚಿವ, ಹಾಲಿ ಶಾಸಕ ಪ್ರಿಯಾಂಕ ಖರ್ಗೆ ಕಣಕ್ಕಿಳಿದಿದ್ದು ಬಿಜೆಪಿಯಿಂದ ಮಣಿಕಂಠ ರಾಥೋಡ್​​​ ಎಂಬುವವರಿಗೆ ಟಿಕೆಟ್​ ಕೊಡಲಾಗಿದೆ.

    ಇನ್ನು ಮಣಿಕಂಠ ರಾಥೋಡ್​ ಖರ್ಗೆ ಕುಟುಂಬದ ಕುರಿತು ಮಾತನಾಡಿದ್ದಾನೆ ಎನ್ನಲಾದ ಆಡಿಯೋ ರಾಜ್ಯ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದು ಈ ಕುರಿತು ಸ್ವತಃ ಬಿಜೆಪಿ ಅಭ್ಯರ್ಥಿ ಸ್ಪಷ್ಟನೆ ನೀಡಿದ್ದಾರೆ.

    ಇದನ್ನೂ ಓದಿ: ಖರ್ಗೆ ಕುಟುಂಬಕ್ಕೆ ಬೆದರಿಕೆ ಆರೋಪ; ಬಿಜೆಪಿ ವಿರುದ್ಧ ಕಾಂಗ್ರೆಸ್​ ಟ್ವೀಟಾಸ್ತ್ರ

    ನಕಲಿ ಆಡಿಯೋ

    ಇನ್ನು ಈ ಕುರಿತು ಚಿತ್ತಾಪುರದಲ್ಲಿ ಮಾತನಾಡಿದ ಮಣಿಕಂಠ ರಾಥೋಡ್​ ಯಾರೋ ನಕಲಿ ಆಡಿಯೋ ಸೃಷ್ಟಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್​ ನಾಯಕರು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದ್ದಾರೆ.

    ಸೋಲುವ ಭೀತಿತಯಿಂದ ನನ್ನ ವಿರುದ್ಧ ಕಾಂಗ್ರೆಸ್​ ನಾಯಕರು ಈ ರೀತಿ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts