ನವದೆಹಲಿ: ಮಣಿಪುರ ಸಂಘರ್ಷಕ್ಕೆ ಸಂಬಂಧಿಸಿದಂತೆ ವಿಪಕ್ಷದವರು ಯಾಕೆ ಚರ್ಚೆಗೆ ಬರುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ಮಣಿಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.
ಮಣಿಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರಿಗೂ ನೋವಿದೆ, ಅದನ್ನು ಎಲ್ಲರೂ ವ್ಯಕ್ತಪಡಿಸಿದ್ದಾರೆ. ಆದರೆ ವಿರೋಧ ಪಕ್ಷದವರು ಮಣಿಪುರ ವಿಷಯಕ್ಕೆ ಸಂಬಂಧಪಟ್ಟಂತೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡಲು ಹಿಂಜರಿಯುತ್ತಿದ್ದಾರೆ ಎಂದು ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: VIDEO | ಸೀಟ್ಗಾಗಿ ‘ಶಕ್ತಿ’ ಪ್ರಯೋಗ: ಬಸ್ನೊಳಗೇ ಜಡೆ ಹಿಡಿದು ಜಗಳವಾಡಿದ ಮಹಿಳೆಯರು!
ಚರ್ಚೆ ಮಾಡಿ ಅಂತ ನಾವು ಪದೇಪದೆ ಕೇಳಿಕೊಳ್ಳುತ್ತಿದ್ದೇವೆ. ಆದರೆ ಅವರು ಚರ್ಚೆಯಿಂದ ಯಾಕೆ ಪಲಾಯನ ಮಾಡುತ್ತಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಅವರ ತಂತ್ರ-ಯೋಚನೆ ಅರ್ಥ ಆಗುತ್ತಿಲ್ಲ. ರಚನಾತ್ಮಕ ಚರ್ಚೆಯಾದರೆ ಅದರಿಂದ ಏನಾದರೂ ಪ್ರಯೋಜನವಾಗುತ್ತದೆ, ಅವರು ಚರ್ಚೆಗೆ ಬರಲಿ ಎಂದು ಜೋಶಿ ಹೇಳಿದರು.
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಮಕ್ಕಳನ್ನು ಡೌನ್ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!