blank

Manipur Violence | ಕರ್ಫ್ಯೂನಿಂದಾಗಿ ಹಲವು ಜಿಲ್ಲೆಗಳಲ್ಲಿ ನಾಳೆಯವರೆಗೆ ಶಾಲಾ-ಕಾಲೇಜುಗಳು ಕ್ಲೋಸ್​​​

blank

ಇಂಫಾಲ: ಮಣಿಪುರದಲ್ಲಿ ಮತ್ತೊಮ್ಮೆ ಹಿಂಸಾಚಾರ(Manipur Violence) ಭುಗಿಲೆದ್ದಿದೆ. ಇದರಿಂದಾಗಿ ಪೊಲೀಸರು ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ. ಆರು ಮೃತದೇಹಗಳು ಪತ್ತೆಯಾದ ನಂತರ ಕರ್ಫ್ಯೂ ಘೋಷಿಸಲಾಯಿತು. ಹೆಚ್ಚುತ್ತಿರುವ ಹಿಂಸಾಚಾರದ ಪರಿಣಾಮವಾಗಿ ರಾಜ್ಯ ಸರ್ಕಾರವು ಏಳು ಜಿಲ್ಲೆಗಳಲ್ಲಿ ಇಂಟರ್​​​​ನೆಟ್​​​​ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಇದನ್ನು ಓದಿ: ಕಾರಿನಲ್ಲಿ ಮಹಿಳೆಯ ಶವ ಪತ್ತೆ; ಪೊಲೀಸರಿಗೆ ಆಕೆಯ ಪತಿಯ ಮೇಲೆ ಹತ್ಯೆ ಗುಮಾನಿ | Body Discovered

ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳು ಸೇರಿದಂತೆ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜುಗಳನ್ನು ಮಂಗಳವಾರದವರೆಗೆ ಮುಚ್ಚಲಾಗುವುದು ಎಂದು ಮಣಿಪುರ ಸರ್ಕಾರ ಸೋಮವಾರ(ನವೆಂಬರ್​​ 18) ಘೋಷಿಸಿದೆ. ಶಿಕ್ಷಣ ಇಲಾಖೆಯು ರಾಜ್ಯ ಗೃಹ ಇಲಾಖೆಯೊಂದಿಗೆ ಸಮಾಲೋಚಿಸಿ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ಎಎನ್​ಐ ವರಿದಿ ಮಾಡಿದೆ.

ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರದ ಆದೇಶದಂತೆ ಸಚಿವಾಲಯದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆದೇಶ ತಿಳಿಸಿದೆ. ಮಣಿಪುರದ ಎಲ್ಲಾ ಸರ್ಕಾರಿ ಸಂಸ್ಥೆಗಳು/ಸರ್ಕಾರಿ ಅನುದಾನಿತ ಕಾಲೇಜುಗಳು ಕರ್ಫ್ಯೂ ವಿಧಿಸಲಾದ ಜಿಲ್ಲೆಗಳಲ್ಲಿ ರಾಜ್ಯ ವಿಶ್ವವಿದ್ಯಾಲಯಗಳು ಸೇರಿದಂತೆ ನವೆಂಬರ್ 18 ರಿಂದ ನವೆಂಬರ್ 19 ರವರೆಗೆ ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ತಿಳಿಸಿದೆ.

ಮಣಿಪುರದಲ್ಲಿ ಈ ತಿಂಗಳ ಮೊದಲ ಎರಡು ವಾರಗಳಲ್ಲಿ ಸಂಭವಿಸಿದ ಇತ್ತೀಚಿನ ಹಿಂಸಾಚಾರಕ್ಕೆ ಸಂಬಂಧಿಸಿದ ಮೂರು ಪ್ರಮುಖ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಹಿಸಿಕೊಂಡಿದೆ. ಇದರ ಪರಿಣಾಮವಾಗಿ ಜೀವಹಾನಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ವ್ಯಾಪಕ ಅಡ್ಡಿಯಾಗಿದೆ. ಮೂರು ಪ್ರಕರಣಗಳಿಗೆ ಸಂಬಂಧಿಸಿದ ಹಿಂಸಾಚಾರದ ಘಟನೆಗಳು ಸಾವಿಗೆ ಮತ್ತು ಸಾಮಾಜಿಕ ಅಶಾಂತಿಗೆ ಕಾರಣವಾದ ಕಾರಣ ಗೃಹ ವ್ಯವಹಾರಗಳ ಸಚಿವಾಲಯ (MHA) ಇತ್ತೀಚೆಗೆ ಹೊರಡಿಸಿದ ನಿರ್ದೇಶನದ ನಂತರ ಮಣಿಪುರ ಪೊಲೀಸರಿಂದ ಈ ಪ್ರಕರಣಗಳನ್ನು ಸಂಸ್ಥೆ ವಹಿಸಿಕೊಂಡಿದೆ.

2024ರ ನವೆಂಬರ್ 8ರಂದು ಜಿರಿಬಾಮ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಉಗ್ರರು ಮಹಿಳೆಯೊಬ್ಬರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿರಿಬಾಮ್ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಏತನ್ಮಧ್ಯೆ ಶಸ್ತ್ರಸಜ್ಜಿತ ಉಗ್ರಗಾಮಿಗಳು ಜಿರಿಬಾಮ್‌ನ ಜಕುರ್ಧೋರ್ ಕರೋಂಗ್‌ನಲ್ಲಿರುವ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಪೋಸ್ಟ್ (ಎ-ಕಂಪನಿ, 20 ನೇ ಬೆಟಾಲಿಯನ್) ಮೇಲಿನ ದಾಳಿಗೆ ಸಂಬಂಧಿಸಿದಂತೆ ಬೊರೊಬೆಕರ ಪೊಲೀಸ್ ಠಾಣೆಯಲ್ಲಿ 2024ರ ನವೆಂಬರ್ 11 ರಂದು ಎರಡನೇ ಪ್ರಕರಣವನ್ನು ದಾಖಲಿಸಲಾಗಿದೆ. ಮೂರನೇ ಪ್ರಕರಣವನ್ನು ನವೆಂಬರ್ 11, 2024ರಂದು ಬೊರೊಬೆಕರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಇದು ಬೊರೊಬೆಕರ ಪ್ರದೇಶದಲ್ಲಿ ಮನೆಗಳಿಗೆ ಬೆಂಕಿ ಹಚ್ಚುವುದು ಮತ್ತು ನಾಗರಿಕರ ಹತ್ಯೆಗೆ ಸಂಬಂಧಿಸಿದೆ.(ಏಜೆನ್ಸೀಸ್​​)

‘ಪಥೇರ್ ಪಾಂಚಾಲಿ’ಯ ದುರ್ಗಾ ಪಾತ್ರಧಾರಿ; ಬಂಗಾಳಿ ನಟಿ ಉಮಾ ದಾಸ್‌ಗುಪ್ತಾ ನಿಧನ | Uma Dasgupta

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…