More

    ಅಬಕಾರಿ ನೀತಿಯಲ್ಲಿ ಅಕ್ರಮ; ಎರಡನೇ ಬಾರಿ ಆರೋಪಪಟ್ಟಿ ಸಲ್ಲಿಸಿದ ಸಿಬಿಐ

    ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಸಿಬಿಐ ಆರೋಪ ಪಟ್ಟಿ ದಾಖಲಿಸಿದೆ.

    ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಹಾಗೂ ವ್ಯಾಪಕ ಭ್ರಷ್ಟಾಚಾರ ಸಂಬಂಧ ಮನೀಶ್​ ಸಿಸೋಡಿಯಾರನ್ನು ಫೆಬ್ರವರಿ 26ರಂದು ಸಿಬಿಐ ವಶಕ್ಕೆ ಪಡೆದಿತ್ತು.

    ಇದನ್ನೂ ಓದಿ: MeToo ಪ್ರತಿಭಟನೆ; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್​ ನೋಟಿಸ್​

    ಆರೋಪ ಪಟ್ಟಿ

    ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳಾದ ಬುಚ್ಚಿ ಬಾಬು ಗೋರಂಟ್ಲಾ, ಅಮನ್​ದೀಪ್​ ಸಿಂಗ್​ ಧಲ್​, ಅರ್ಜುನ್​ ಪಾಂಡೆ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.

    ಆರೋಪಿತರ ವಿರುದ್ಧ ಭಅರತ ದಂಡ ಸಂಹಿತೆ (IPC Section) 120-B, 201 ಹಾಗೂ 420 ಅಡಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಒಟ್ಟಾರೆಯಾಗಿ ಎರಡನೇ ಆರೋಪ ಪಟ್ಟಿಯಾಗಿದ್ದು ಕಳೆದ ವರ್ಷ ನವೆಂಬರ್​ 25ರಂದು ಮೊದಲ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts