More

    ಪ್ರಗತಿಯಲ್ಲಿ ಕ್ರೀಡಾಂಗಣಗಳ ಕಾಮಗಾರಿ: ಮಹದೇವಪುರ ಅಭಿವೃದ್ಧಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ

    ಮಹದೇವಪುರ: ಕ್ಷೇತ್ರದಲ್ಲಿ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡುವ ನಿಟ್ಟಿನಲ್ಲಿ ಹೂಡಿ ಒಳಾಂಗಣ ಕ್ರೀಡಾಂಗಣ, ಗುಂಜೂರು ವಾಜಪೇಯಿ ಕ್ರೀಡಾಂಗಣ, ದೊಡ್ಡಕನ್ನಳ್ಳಿ, ಕಾಡುಗುಡಿ ಗ್ರಾಮಗಳಲ್ಲಿ ರಾಷ್ಟ್ರೀಯಮಟ್ಟದ ಕ್ರೀಡಾಂಗಣಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

    ಸಾದರಮಂಗಳ, ಸಾದರಮಂಗಳ ಸ್ಲಂ ಬೋರ್ಡ್, ಕೊಡಿಗೇಹಳ್ಳಿ, ಅಯ್ಯಪ್ಪನಗರ, ಹೂಡಿ, ರಾಜಪಾಳ್ಯ, ತಿಗಳರಪಾಳ್ಯ ಸೇರಿ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದರು.

    ಇದನ್ನೂ ಓದಿ: ಬಿಜೆಪಿಗೆ ಸಂಪೂರ್ಣ ಬೆಂಬಲ ಎಂದು ಹೇಳಿ ಕೊನೆಯ ಕ್ಷಣದಲ್ಲಿ ಕೈಕೊಟ್ಟ ಸುಮಲತಾ!

    ಅಂತರ್ಜಲ ಮಟ್ಟ ಸುಧಾರಿಸಲು ಹಾಗೂ ಜೀವವೈವಿಧ್ಯ ಸುಧಾರಿಸುವ ನಿಟ್ಟಿನಲ್ಲಿ 60ಕ್ಕೂ ಹೆಚ್ಚು ಕೆರೆಗಳನ್ನು ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಅಭಿವೃದ್ಧಿಪಡಿಸಿರುವುದು ಬಿಜೆಪಿ ಕಾರ್ಯವೈಖರಿಗೆ ಕನ್ನಡಿಯಾಗಿದೆ. ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೆರೆ ಹಾಗೂ ಕಲ್ಯಾಣಿಗಳ ಅಭಿವೃದ್ಧಿ ಮಾಡಲಾಗುತ್ತಿದ್ದು, ಜಲಮೂಲಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಕ್ಷೇತ್ರದ ಅತಿದೊಡ್ಡ ಕೆರೆಗಳಾದ ಬೆಳ್ಳಂದೂರು, ವರ್ತರು, ರಾಂಪುರ ಹಾಗೂ ಎಲೆ ಮಲ್ಲಪ್ಪ ಶೆಟ್ಟಿ ಕೆರೆಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ ಎಂದು ಮಂಜುಳಾ ತಿಳಿಸಿದರು.

    ನಾನು-ಪತಿ ಡಬಲ್ ಇಂಜಿನ್​ನಂತೆ ಸೇವೆ ಸಲ್ಲಿಸುತ್ತೇವೆ: ಮಂಜುಳಾ ಅರವಿಂದ ಲಿಂಬಾವಳಿ ಭರ್ಜರಿ ಪ್ರಚಾರ

    ಅಭಿವೃದ್ಧಿಗಾಗಿ ಮತ ನೀಡಿ: ಮಂಜುಳಾ ಲಿಂಬಾವಳಿ ಮನವಿ

    ಅಭಿವೃದ್ಧಿ ಜತೆಗೆ ಶಾಂತಿಗೆ ಆದ್ಯತೆ: ಮಹಾದೇವಪುರದ ಬಿಜೆಪಿ ಅಭ್ಯರ್ಥಿ ಮಂಜುಳಾ ಭರವಸೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts