More

    ಅಭಿವೃದ್ಧಿ ಜತೆಗೆ ಶಾಂತಿಗೆ ಆದ್ಯತೆ: ಮಹಾದೇವಪುರದ ಬಿಜೆಪಿ ಅಭ್ಯರ್ಥಿ ಮಂಜುಳಾ ಭರವಸೆ

    ಮಹದೇವಪುರ: ಕ್ಷೇತ್ರದಲ್ಲಿ ಅಭಿವೃದ್ಧಿಯೊಂದಿಗೆ ಶಾಂತಿ, ನೆಮ್ಮದಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಹೇಳಿದ್ದಾರೆ.

    ಕ್ಷೇತ್ರದ ವಿವಿಧೆಡೆ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ ಸಭೆಗಳಲ್ಲಿ ಪಾಲ್ಗೊಂಡು ಮಾತನಾಡಿದರು. ಕ್ಷೇತ್ರದಲ್ಲಿ ಅನ್ಯ ಭಾಷಿಕರು ಸೇರಿ 6 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ನಿತ್ಯ 10 ಲಕ್ಷಕ್ಕೂ ಹೆಚ್ಚು ಮಂದಿ ಕೆಲಸಕ್ಕಾಗಿ ಬಂದು ಹೋಗುತ್ತಿದ್ದಾರೆ. 15 ವರ್ಷದಿಂದ ಜಾತಿ ಜಾತಿಗಳ ನಡುವೆ ಯಾವುದೇ ರೀತಿಯ ವೈಮನಸ್ಸು ಉಂಟಾಗದಂತೆ ಅಭಿವೃದ್ಧಿಯೊಂದಿಗೆ ಸಮಾನತೆ, ಶಾಂತಿ ಸುವ್ಯವಸ್ಥೆಯನ್ನು ಪತಿ ಅರವಿಂದ ಲಿಂಬಾವಳಿ ಕಾಪಾಡಿ ಕೊಂಡು ಬಂದಿದ್ದಾರೆ. ಮುಂದೆಯೂ ಇದೇ ವಾತಾವರಣ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಬೇಕೆಂದು ಕೋರಿದರು.

    ಮುಂದುವರಿದ ಪಕ್ಷ ಸೇರ್ಪಡೆ: ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಮುಂದುವರಿದಿದೆ. ಶನಿವಾರ ಕೂಡ ಮಾರತಹಳ್ಳಿಯ ಶಾಸಕರ ಕಚೇರಿಯಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರ, ಎಸ್ಸಿ ಘಟಕದ ರಾಜ್ಯ ಸಂಚಾಲಕ, ವೈ.ಲಕ್ಷ್ಮೀಪ್ರಸಾದ್, ವಿಜಯೇಂದ್ರ ಮಣಿ, ಪ್ರೇಮ್‌ಸಾಗರ್, ಚಂದ್ರಶೇಖರ್, ಸುಕೂರ್, ನಾಸೀರ್ ಇನ್ನಿತರ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts