More

    ಮಂಜುನಾಥನ ಸನ್ನಿಧಿಗೆ ಜಿಪಂ ಅಧ್ಯಕ್ಷೆ ವಿರುದ್ಧ ದೂರು?

    ಕೊಪ್ಪ: ಪಕ್ಷದ ಮುಖಂಡರಿಗೆ ಲೀಗಲ್ ನೋಟಿಸ್ ನೀಡಿರುವ ಹಾಗೂ ಜಿಪಂ ಸದಸ್ಯರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿರುವ ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ವರ್ತನೆ ಬಗ್ಗೆ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ದೂರು ಕೊಂಡೊಯ್ಯುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ.

    ಕೊಪ್ಪದಲ್ಲಿ ವಿಜಯವಾಣಿಯೊಂದಿಗೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ, ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಅಧ್ಯಕ್ಷರ ವರ್ತನೆ ಬಗ್ಗೆ ದೂರು ನೀಡುವ ಕುರಿತ ಪಕ್ಷದಲ್ಲಿ ರ್ಚಚಿಸಲಾಗುತ್ತದೆ ಎಂದು ಹೇಳಿದರು.

    ಪಕ್ಷದಿಂದ ಅಧಿಕಾರ ಪಡೆದಿರುವ ಸುಜಾತ ಕೃಷ್ಣಪ್ಪ, ತಾಯಿಗೆ ಮಕ್ಕಳು ವಿಷ ಹಾಕುವ ಕೆಲಸ ಮಾಡಿದ್ದಾರೆ. ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ ಬಿಜೆಪಿ ಪಕ್ಷದ ಸದಸ್ಯರ ವಿರುದ್ಧವೇ ದೂರು ನೀಡಿದ್ದಾರೆ. ಅಧ್ಯಕ್ಷರ ನಡೆ ಬಗ್ಗೆ ಹೆದರುವುದಿಲ್ಲ . ಕೊಪ್ಪ ತಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದ್ದಾಗಲೂ ಅವರನ್ನು ಅಧ್ಯಕ್ಷರಾಗಿ ಮಾಡಿದ್ದೇವೆ. ಜಿಪಂನಲ್ಲಿ ಟಿಕೆಟ್ ನೀಡಿ 1500 ಅಧಿಕ ಅಂತರದಿಂದ ಗೆಲ್ಲಿಸಿ, ಜಿಪಂಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದನ್ನು ಮರೆತು ಪಕ್ಷಕ್ಕೆ ದ್ರೋಹ ಬಗೆಯುತ್ತಿದ್ದಾರೆ ಎಂದು ದೂರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts