ಗಾಂಧಿನಗರ: ಗುಜರಾತ್ನ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ಮನ್ಸುಖ್ ವಾಸವಾ ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬುಧವಾರದಂದು ಅದನ್ನು ವಾಪಾಸು ಪಡೆದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಅವರು ರಾಜೀನಾಮೆ ನಿರ್ಧಾರವನ್ನು ಕೈ ಬಿಟ್ಟಿರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ: ಬಿಜೆಪಿ ಹಿರಿಯ ಸಂಸದ ರಾಜೀನಾಮೆ; ನನ್ನ ತಪ್ಪಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂದ ಮಾಜಿ ಕೇಂದ್ರ ಸಚಿವ
ಮನ್ಸುಖ್ ಅವರು ಮಂಗಳವಾರದಂದು ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಿಆರ್ ಪಾಟಿಲ್ ಅವರಿಗೆ ಕಳುಹಿಸಿಕೊಟ್ಟಿದ್ದರು. ನನಗೆ ಪಕ್ಷ ಹೆಚ್ಚಿನ ಜವಾಬ್ದಾರಿಯನ್ನೇ ಕೊಟ್ಟಿತ್ತು. ನನ್ನ ತಪ್ಪಿನಿಂದಾಗಿ ಪಕ್ಷಕ್ಕೆ ಕೆಟ್ಟ ಹೆಸರು ಬರಬಾರದೆಂದು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದರು. ಮುಂದಿನ ಕೇಂದ್ರ ಬಜೆಟ್ ಅಧಿವೇಶನದ ಸಮಯದಲ್ಲಿ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಅವರು ಹೇಳಿಕೊಂಡಿದ್ದರು.
ರಾಜೀನಾಮೆ ನೀಡಿದ ನಂತರ ಅವರು ಸಿಆರ್ ಪಾಟೀಲ್ರನ್ನು ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅದಾದ ನಂತರ ತಮ್ಮ ರಾಜೀನಾಮೆಯನ್ನು ವಾಪಾಸು ಪಡೆದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಒಣಗಿಸಿದ್ದ ಬಟ್ಟೆ ತರಲು ಹೋದ ಯುವತಿಯನ್ನು ಅಪಹರಿಸಿ ರೇಪ್ ಮಾಡಿದ ಪಾಪಿಗಳು!
ಆರು ಬಾರಿ ಭರೂಚ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಮನ್ಸುಖ್ ಅವರು, ರಾಜ್ಯ ಬಿಜೆಪಿಯೊಂದಿಗೆ ಮನಸ್ಥಾಪ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ತಾವು ಎತ್ತಿದ್ದ ಅನೇಕ ಸಮಸ್ಯೆಗಳ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ ಎನ್ನುವ ಬೇಸರದಿಂದ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. (ಏಜೆನ್ಸೀಸ್)
ಸರ್ಪೈಸ್ ನೀಡಲು ಮನೆಗೆ ಬಂದ ಗಂಡನಿಗೆ ಕಾದಿತ್ತು ಬಿಗ್ ಶಾಕ್! ಹೆಂಡತಿಯ ಇನ್ನೊಂದು ರೂಪ ನೋಡಿದ ಗಂಡ ಮಾಡಿದ್ದೇನು?
ಮೂಗಿನ ಸರ್ಜರಿ ಮಾಡಿಸಿ, ಎರಡೂ ಕಾಲು ಕಳೆದುಕೊಂಡ ಯುವತಿ! ಚಿಕನ್ ತಿಂದಿದ್ದೇ ಕಾರಣ ಎಂದ ಆಸ್ಪತ್ರೆ