More

    ಸಿದ್ದಕಟ್ಟೆ ಜವನೆರೆ ತುಡರ್ ಟ್ರಸ್ಟ್‌ನಿಂದ ‘ಮಂಥನ’ ವ್ಯಕ್ತಿತ್ವ ವಿಕಸನ ತರಬೇತಿ

    ಬಂಟ್ವಾಳ: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸ್ಪರ್ಧೆ ಮತ್ತು ಸಾಧನಾ ಮನೋಭಾವ ಮೈಗೂಡಿಸಿಕೊಂಡಾಗ ಅವರಲ್ಲಿ ಅಪ್ರತಿಮ ಸಾಧನೆ ಜತೆಗೆ ಸಮಾಜದ ಶಕ್ತಿಯಾಗಿ ಬೆಳೆದು ನಿಲ್ಲಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಸ್.ಸತೀಶ್ ಕುಮಾರ್ ಹೇಳಿದರು.

    ಸಿದ್ದಕಟ್ಟೆ ಜವನೆರೆ ತುಡರ್ ಟ್ರಸ್ಟ್ ವತಿಯಿಂದ ಸಿದ್ದಕಟ್ಟೆ ಬ್ರಹಶ್ರೀ ನಾರಾಯಣಗುರು ಸಭಾಂಗಣದಲ್ಲಿ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಮಂಥನ-2023 ಉದ್ಘಾಟಿಸಿ ಮಾತನಾಡಿದರು.

    ಸಿದ್ದಕಟ್ಟೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ದಿನೇಶ ಸುಂದರ ಶಾಂತಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಸುಪ್ರೀತ್ ಆಳ್ವ, ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್, ರಾಯಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಉಪನ್ಯಾಸಕ ಶೀನಪ್ಪ ಎನ್. ಉಪಸ್ಥಿತರಿದ್ದರು.

    ರಕ್ತದಾನ ಶಿಬಿರ, ಪ್ರತಿಭಾ ಪುರಸ್ಕಾರ ನಡೆಯಿತು. ಶಾಸಕ ರಾಜೇಶ ನಾಯಕ್ ಉಳಿಪಾಡಿಗುತ್ತು ಮತ್ತು ನಿವೃತ್ತ ಸೇನಾನಿ ಕ್ಯಾ.ಬ್ರಿಜೇಶ್ ಚೌಟ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ನಾರಾಯಣ ನಾಯಕ್ ಕರ್ಪೆ, ಅಭಿಜಿತ್ ಕರ್ಕೇರ ಮಂಗಳೂರು, ನಿಧಿ ಬಿ.ಎನ್. ಉಡುಪಿ, ಲೋಹಿತ್ ಕೆ.ಮೂಡಬಿದಿರೆ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಪುಣ್ಯಭೂಮಿ ತುಳುನಾಡ ಸೇವಾ ಫೌಂಡೇಶನ್ ಸಮಾಜಸೇವಕ ಚಂದ್ರಶೇಖರ ಬಿ.ಸಿ.ರೋಡು ಅವರಿಗೆ ತುಡರ್ ಪುರಸ್ಕಾರ ನೀಡಲಾಯಿತು.

    ಸಮಾರೋಪ: ಸಮಾರೋಪ ಕಾರ್ಯಕ್ರಮದಲ್ಲಿ ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್‌ಬಾಗ್, ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್‌ನ ಅರ್ಜುನ್ ಭಂಡಾರ್ಕರ್, ರೋಟರಿ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಗಣೇಶ ಶೆಟ್ಟಿ, ಯುವವಾಹಿನಿ ಘಟಕ ಮಾಜಿ ಅಧ್ಯಕ್ಷ ಗಣೇಶ ಪೂಂಜರಕೋಡಿ, ಅರಳ ಓಂಜನ ಹಿತಾಯ ಆಂಗ್ಲ ಮಾಧ್ಯಮ ಶಾಲೆ ಆಡಳಿತಾಧಿಕಾರಿ ರಕ್ಷಾ ರಂಜನ್ ಶೆಟ್ಟಿ, ಪುತ್ತೂರು ಅಂಚೆ ಉಪವಿಭಾಗ ಅಧಿಕಾರಿ ಗುರುಪ್ರಸಾದ್ ಕೆ.ಎಸ್., ಪ್ರಾಧ್ಯಾಪಕ ಚೇತನ್ ಮುಂಡಾಜೆ, ಸಮಾಜಸೇವಕ ಪ್ರವೀಣ್ ಮೂಡಿಗೆರೆ ಉಪಸ್ಥಿತರಿದ್ದರು. ಟ್ರಸ್ಟಿ ದಿನೇಶ್ ಸುವರ್ಣ ಸ್ವಾಗತಿಸಿದರು. ಪ್ರಜ್ವಲ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts