More

    ಕೇಂದ್ರ ಯೋಜನೆ ಮನವರಿಕೆ ಮಾಡಿ

    ಮಾನ್ವಿ: ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ ಹೇಳಿದರು.
    ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಗ್ರಾಮ ಚಲೋ ಅಭಿಯಾನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮನೆ ಮನೆಗೆ ಬಿಜೆಪಿ ಮನ ಮನಕ್ಕೆ ಮೋದಿ ಘೋಷಣೆಯೊಂದಿಗೆ ಫೆ.9 ರಿಂದ 11 ರವರೆಗೆ ಅಭಿಯಾನ ರಾಷ್ಟ್ರವ್ಯಾಪಿ ನಡೆಯಲಿದೆ. ಕಾರ್ಯಕರ್ತರು ಯೋಜನೆಗಳನ್ನು ಜನರಿಗೆ ತಿಳಿಸಲಿ ಎಂದರು.

    ಇದನ್ನೂ ಓದಿ: 6ರಿಂದ 12ನೇ ತರಗತಿಯ ಶಾಲಾ ಪಠ್ಯಕ್ರಮಕ್ಕೆ ಭಗವದ್ಗೀತೆ ಸೇರಿಸಲು ಮುಂದಾಯ್ತು ಈ ರಾಜ್ಯ ಸರ್ಕಾರ!

    ಕೇಂದ್ರ ಬಿಜೆಪಿ ಸರ್ಕಾರದ ಮಹತ್ವ ಪೂರ್ಣ ಜನಕಲ್ಯಾಣ ಯೋಜನೆಗಳ ಮೂಲಕ ಪ್ರತಿ ಮನೆಗಳಿಗೆ ಭೇಟಿ ನೀಡಿ ಜನರಿಗೆ ತಿಳಿಸಬೇಕು. ನವ ಭಾರತವನ್ನು ಕಟ್ಟಲು ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಬರಲು ಪ್ರಯತ್ನ ಪಡಬೇಕು ಎಂದು ತಿಳಿಸಿದರು.
    ಪ್ರಮುಖರಾದ ಸುಲೋಚನಾ ಕುಮಾರಸ್ವಾಮಿ, ಅನಿಲ್‌ಕುಮಾರ್, ಅರಕೇರಿ ರಾಮಣ್ಣ ನೀರಮಾನ್ವಿ, ಅಯ್ಯಪ್ಪ ನಾಯಕ ಮ್ಯಾಕಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts