More

    ಸಾಲಿ, ಚೈತ್ರಾ, ಸತ್ಯಣ್ಣವರ್‌ಗೆ ಸಾಹಿತ್ಯ ಪುರಸ್ಕಾರ

    ಮಾನ್ವಿ: ಪಟ್ಟಣದ ಪ್ರಾರ್ಥನಾ ದತ್ತಿ ಸಂಸ್ಥೆಯ 2022ನೇ ಸಾಲಿನ ರಾಜ್ಯಮಟ್ಟದ ಸಾಹಿತ್ಯ ಪುರಸ್ಕಾರಕ್ಕೆ ಸಾಹಿತಿ ಚಿದಾನಂದ ಸಾಲಿ, ಕವಿಗಳಾದ ಚೈತ್ರಾ ಶಿವಯೋಗಿಮಠ ಹಾಗೂ ಸಿದ್ದು ಸತ್ಯಣ್ಣವರ ಆಯ್ಕೆಯಾಗಿದ್ದಾರೆ.

    2022ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಕಥಾ ಸಂಕಲನ ಹಾಗೂ ಕವನ ಸಂಕಲನಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿತ್ತು. ಕಥಾ ಸಂಕಲನ ವಿಭಾಗದಲ್ಲಿ ಚಿದಾನಂದ ಸಾಲಿ ರಚಿಸಿರುವ ‘ಹೊಗೆಯ ಹೊಳೆಯಿದು ತಿಳಿಯದು’, ಕವನ ಸಂಕಲನ ವಿಭಾಗದಲ್ಲಿ ಚೈತ್ರಾ ಶಿವಯೋಗಿಮಠ ಅವರ ‘ಪೆಟ್ರಿಕೋರ್’ ಮತ್ತು ಸಿದ್ದು ಸತ್ಯಣ್ಣವರ ಅವರ ‘ಗಾಳಿಯ ಮಡಿಲು’ ಕೃತಿಗಳು ಆಯ್ಕೆಯಾಗಿವೆ.

    ಕಥಾ ವಿಭಾಗದಲ್ಲಿ ಮೈಸೂರಿನ ಹಿರಿಯ ಸಾಹಿತಿ ಜಿ.ಪಿ.ಬಸವರಾಜು ಹಾಗೂ ಕತೆಗಾರ ಟಿ.ಎಸ್.ಗೊರವರ ತೀರ್ಪುಗಾರರಾಗಿದ್ದರು. ಕಾವ್ಯ ವಿಭಾಗದಲ್ಲಿ ಸಾಹಿತಿಗಳಾದ ವಿಕ್ರಮ್ ವಿಸಾಜಿ ಹಾಗೂ ಸಬಿತಾ ಬನ್ನಾಡಿ ತೀರ್ಪುಗಾರರಾಗಿದ್ದರು. ಮಾರ್ಚ್‌ನಲ್ಲಿ ಮಾನ್ವಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅತ್ಯುತ್ತಮ ಕಥಾ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿರುವ ಚಿದಾನಂದ ಸಾಲಿಗೆ 10 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ. ಅತ್ಯುತ್ತಮ ಕವನ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿರುವ ಚೈತ್ರಾ ಶಿವಯೋಗಿಮಠ ಹಾಗೂ ಸಿದ್ದು ಸತ್ಯಣ್ಣನವರ ಅವರಿಗೆ ತಲಾ 5 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರಾರ್ಥನಾ ದತ್ತಿ ಸಂಸ್ಥೆಯ ಅಧ್ಯಕ್ಷ ಡಾ.ಯಂಕನಗೌಡ ಬೊಮ್ಮನಹಾಳ ಹಾಗೂ ಸಂಚಾಲಕ ಬಸವರಾಜ ಭೋಗಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts