ತುಮಕೂರು: ರಾಜ್ಯದಲ್ಲಿ ಇತ್ತೀಚೆಗೆ ಭಾರಿ ಅಪಘಾತಗಳು ಸಂಭವಿಸುತ್ತಿದ್ದು, ಇಲ್ಲೊಂದು ಪ್ರದೇಶದಲ್ಲಿ ಕೂಡ ಮೇಲಿಂದ ಮೇಲೆ ಆ್ಯಕ್ಸಿಡೆಂಟ್ ಆಗಿದ್ದು, ಇಂದು ಕೂಡ ಅಪಘಾತಕ್ಕೆ ಒಬ್ಬರು ಬಲಿಯಾಗಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ನಿವಾಸಿ ವೆಂಕಟೇಶ್ (35) ಸಾವಿಗೀಡಾದ ವ್ಯಕ್ತಿ. ದೊಡ್ಡಗುಣಿ ಬಳಿಯ ಹರೇನಹಳ್ಳಿ ಗ್ರಾಮದಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಕೊಂಡ್ಲಿ- ದೊಡ್ಡಗುಣಿ ಬಳಿ ಪದೇಪದೆ ಅಪಘಾತಗಳು ಸಂಭವಿಸುತ್ತಿದ್ದು ಆತಂಕ ಮೂಡಿಸಿದೆ. ಅದರಲ್ಲೂ ಕಳೆದ ಮೂರು ದಿನಗಳಿಂದ ಈ ಪ್ರದೇಶದಲ್ಲಿ ನಾಲ್ಕೈದು ಅಪಘಾತಗಳು ಸಂಭವಿಸಿದೆ. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಉಂಟಾಗಿದೆ.
ಭೀಕರ ಅಪಘಾತ: ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದ ಕಾರು, ನಾಲ್ವರ ಸಾವು