ರಾಯ್ಪುರ್: ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಪೋಟಕ ಸ್ಪೋಟಿಸಿದ ಪರಿಣಾಮ ಚತ್ತೀಸ್ಗಡ್ದ ನಾರಾಯಣಪುರ ಜಿಲ್ಲಾ ರಿಸರ್ವ್ ಪೊಲೀಸ್ ಪಡೆಯ ಮೂವರು ಸಿಬ್ಬಂದಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಬಸ್ತಾರ್ ಅರಣ್ಯ ವಲಯದ ನಾರಾಯಣಪುರ ಜಿಲ್ಲೆಯ ಅಬ್ಜುಮಾಡ್ ಎಂಬಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ಮುಗಿಸಿ ಸುಮಾರು 24 ಸಿಬ್ಬಂದಿ ಬಸ್ನಲ್ಲಿ ವಾಪಸ್ ಬರುವಾಗ ಈ ಘಟನೆ ನಡೆದಿದೆ.
ಘಟನೆಯಲ್ಲಿ 10 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗಬಹುದು ಎಂದು ಚತ್ತೀಸ್ಗಡ್ದ ಡಿಜಿಪಿ ಡಿಎಂ ಅವಸ್ತಿ ಅವರು ತಿಳಿಸಿದ್ದಾರೆ.
ಪೊಲೀಸರಿಂದ ತಪ್ಪಿಸಿಕೊಳ್ಳಲು ಸಿಗ್ನಲ್ ಆ್ಯಪ್ ಬಳಸುತ್ತಿರುವ ಸಿಡಿ ಪ್ರಕರಣದ ಕಿಂಗ್ಪಿನ್ಗಳು!
ಆಮೆಗಳ ದಿಕ್ಕು ತಪ್ಪಿಸುವ ವಿದ್ಯುತ್ ದೀಪಗಳು! ಎಲ್ಲ ಆಮೆಗಳು ಒಂದೇ ದಿನ ಮೊಟ್ಟೆ ಇಡೋದಕ್ಕೆ ಕಾರಣವಿದು…!