ಮರಂಗಾಗಿ ಸರ್ಕಾರಿ ಜಮೀನು ಪರಿಶೀಲನೆ

blank

ಸಿರವಾರ: ತಾಲೂಕಿನಲ್ಲಿ ಹಾದು ಹೋಗಿರುವ ಎನ್‌ಎಚ್ ರಸ್ತೆ ಕಾಮಗಾರಿಗೆ ಅಗತ್ಯವಿರುವ ಮರಂಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಂಟಿ ನಿರ್ದೇಶಕ, ಮುಖ್ಯ ಇಂಜಿನಿಯರ್ ವೇಣುಗೋಪಾಲ ಅವರು ಶನಿವಾರ ಸರ್ಕಾರಿ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

blank

ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಸ್ಪರ್ಶ

ಎನ್.ಎಚ್.748-ಎ ರಸ್ತೆ ಕಾಮಗಾರಿ ಅಭಿವೃದ್ಧಿ ಪಡಿಸುವ ಸಲುವಾಗಿ ಅಮೃತ ಸರೋವರ ಮಿಷನ್ ಅಡಿ ಸರ್ಕಾರಿ ಜಮೀನಿನಲ್ಲಿರುವ ಮರಂ ತೆಗೆದು ಕೆರೆ ನಿರ್ಮಾಣ ಮಾಡಿ, ಮರಂ ಅನ್ನು ರಸ್ತೆ ಕೆಲಸಕ್ಕೆ ಬಳಸಿಕೊಳ್ಳಲು ಯೋಜನೆ ಹಾಕಿಕೊಳ್ಳಲಾಗಿದೆ.

ಅದಕ್ಕಾಗಿ ತಾಲೂಕಿನ ಮಲ್ಲಟ ಹಾಗೂ ಪಟಕನದೊಡ್ಡಿ, ಚಿಕ್ಕಹಣಿಗಿ ಗ್ರಾಮಗಳಲ್ಲಿ ಜಮೀನುಗಳಿಗೆ ತೆರಳಿ ಪರಿಶೀಲಿಸಿದರು. ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ ಜಾವೂರ, ಎನ್.ಎಚ್.ಅಧಿಕಾರಿ ಭೀಮರಾವ್, ಜಿಪಂ ಎಡಿಪಿಸಿ ಮಲ್ಲಮ್ಮ, ತಾಂತ್ರಿಕ ಸಂಯೋಜಕ ಶಿವು, ತಾಂತ್ರಿಕ ಸಹಾಯಕ ನರಸಪ್ಪ ಇತರರಿದ್ದರು.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank