More

    ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ವಿಷಾದ; ಇತಿಹಾಸವನ್ನು ತಿರುಚಿ ಹೇಳುವ ಕೆಲಸ

    ಧಾರವಾಡ: ಇಡೀ ದೇಶಕ್ಕೆ ಮೀಸಲಾತಿ ಕೊಟ್ಟ ಸಮಾಜ ನಮ್ಮದು. ಆದರೆ, ನಾವಿಂದು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಮರಾಠರು ಹಿಂದುಗಳೇ ವಿನಃ ಹಿಂದುತ್ವವಾದಿಗಳಲ್ಲ. ಇಂದು ಮರಾಠರು ಮುಸ್ಲಿಂ ವಿರೋಽಗಳು ಎಂದು ಸಮಾಜದಲ್ಲಿ ವ್ಯವಸ್ಥಿತವಾಗಿ ಬಿಂಬಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
    ನಗರದ ಮರಾಠಾ ವಿದ್ಯಾಪ್ರಸಾರಕ ಮಂಡಳದಲ್ಲಿ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮರಾಠಾ ಜಾಗೃತಿ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಉಳುವವರಿಗೆ ಭೂಮಿ ನೀಡಿದ ಸಮಾಜ ನಮ್ಮದು. ಆದರೂ ನಮಗೆ ಜಾಗ ನೀಡುವಂತೆ ಸರ್ಕಾರವನ್ನು ಕೇಳುವ ಪರಿಸ್ಥಿತಿ ಬಂದೊದಗಿದೆ. ಶಿವಾಜಿ ಜಯಂತಿ ಸಂದರ್ಭದಲ್ಲಿ ಹಿಂದುತ್ವದ ಬಗ್ಗೆ ಸಾಕಷ್ಟು ಜನ ಭಾಷಣ ಮಾಡುತ್ತಾರೆ. ಆದರೆ, ಅವರ ಮನೆಯಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರವಿರುವುದಿಲ್ಲ. ಇತಿಹಾಸವನ್ನು ತಿರುಚಿ ಹೇಳುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಪ್ರತಿಯೊಬ್ಬ ಮರಾಠರು ಶಿವಾಜಿ ಮಹಾರಾಜರ ಇತಿಹಾಸವನ್ನು ತಿಳಿದು, ತಿಳಿಸಿ ಹೇಳಬೇಕು ಎಂದರು,
    ಬಡವರಿಗೆ, ತೊಂದರೆಯಲ್ಲಿ ಇರುವವರಿಗೆ ಸಹಾಯ ಮಾಡುವವರೇ ಛತ್ರಪತಿ. ಆ ಕೆಲಸವನ್ನು ಶಿವಾಜಿ ಮಹಾರಾಜರು ಮಾಡಿದರು. ಅದಕ್ಕಾಗಿ ಅವರನ್ನು ಛತ್ರಪತಿ ಎನ್ನುತ್ತೇವೆ. ಶಿವಾಜಿ ಮಹಾರಾಜರು ಬೆಳೆಯಲು ತಾಯಿ ಜೀಜಾಮಾತಾ ಕಾರಣ. ಆದ್ದರಿಂದ ಪ್ರತಿಯೊಂದು ಕಾರ್ಯಕ್ರಮದಲ್ಲಿ ನಾವು ಮಹಿಳೆಯರಿಗೆ ವಿಶೇಷ ಗೌರವ ನೀಡುತ್ತೇವೆ ಎನ್ನುವುದನ್ನು ಸಮಾಜದ ಬಾಂಧವರು ಅರಿತುಕೊಳ್ಳಬೇಕು ಎಂದರು.
    ಶಿವಾಜಿ ಜಯಂತಿ ಸೇರಿ ಇತರೆ ಮಹನೀಯರ ಜಯಂತಿ ವೇಳೆ ಡಿಜೆ ಹಾಡುಗಳಿಗೆ ಕುಡಿದು ಸಂಭ್ರಮಿಸಬಾರದು. ಇದು ಮಹನೀಯರಿಗೆ ಮಾಡುವ ಅಪಮಾನ ಎಂದರು.
    ಬೆAಗಳೂರು ಗೋಸಾವಿ ಮಠದ ಮಂಜುನಾಥ ಭಾರತಿ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಲು ಎಲ್ಲರೂ ಒಂದಾಗಿ ಶ್ರಮಿಸಬೇಕು. ಎಲ್ಲರೂ ಸೇರಿ ಉತ್ತಮ ಸಮಾಜವನ್ನು ಕಟ್ಟೋಣ ಎಂದರು.
    ಇದೇ ಸಂದರ್ಭದಲ್ಲಿ ಸುಮಾರು ೧೫೦ಕ್ಕೂ ಹೆಚ್ಚು ಮರಾಠಾ ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು. ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಬ್ರಹ್ಮಾನಂದ ಸ್ವಾಮೀಜಿ, ಅನೀಲ ಪಾಟೀಲ, ಡಾ. ಮಯೂರ ಮೋರೆ, ಶಂಕರ ಶೇಳಕೆ, ಸಂಭಾಜಿ ಘೋಡಸೆ, ಭೀಮಪ್ಪ ಕಸಾಯಿ, ರಾಜು ಬಿರಜನ್ನವರ, ಸುಭಾಸ ಶಿಂಧೆ, ಸುನೀಲ ದಳವಿ, ಬಸವಂತ ಮಾಲನವರ, ಬಸವರಾಜ ಜಾಧವ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts