More

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ

    ಶಿವಮೊಗ್ಗ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಯಾವುದೇ ಹಿಂದುಳಿದ ಸಮುದಾಯದ ಹೆಸರಿನಲ್ಲಿ ಪ್ರಾಧಿಕಾರಗಳನ್ನು ಸ್ಥಾಪಿಸಿದರೆ ನಮ್ಮ ಆಕ್ಷೇಪವಿಲ್ಲ. ಹಲವಾರು ಸಮುದಾಯಗಳ ಹೆಸರಿನಲ್ಲಿ ಈಗಾಗಲೇ ಪ್ರಾಧಿಕಾರಗಳಿವೆ. ಸಾಮಾಜಿಕ ನ್ಯಾಯ ಕಾಪಾಡುವ ದೃಷ್ಟಿಯಿಂದ ಇದು ಅನಿವಾರ್ಯ. ಆದರೆ ಭಾಷಾ ಅಲ್ಪಸಂಖ್ಯಾತರ ಹೆಸರಿನಲ್ಲಿ ಪ್ರಾಧಿಕಾರಗಳನ್ನು ಸ್ಥಾಪಿಸುವುದಕ್ಕೆ ಆಕ್ಷೇಪ ಮತ್ತು ವಿರೋಧವಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಪ್ರತಿಭಟನಾಕಾರರು ದೂರಿದರು.

    ಮಹಾರಾಷ್ಟ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗುವುದು ಹೇಗೆ ಸಾಧ್ಯವಿಲ್ಲವೋ ಅದೇ ರೀತಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಸಾಧ್ಯವಿಲ್ಲ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ಹೊರಟರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಎಸ್.ಎಂ.ಮಧುಸೂದನ್, ಪ್ರಮುಖರಾದ ಎಂ.ನಯಾಜ್, ನೂರುಲ್ಲಾ, ಎಸ್.ಭರತ್, ರಘುನಂದನ್, ಶಿವಕುಮಾರ್, ಅಮೃತ್, ಇಂದ್ರೇಶ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts