ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಸ್ವಚ್ಛತೆ

blank

ಶಿರಸಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಸಭೆಯ ವೇಳೆ ಸಾರ್ವಜನಿಕರು ಎಸೆದಿದ್ದ ತ್ಯಾಜ್ಯವನ್ನು ಜೀವಜಲ ಕಾರ್ಯಪಡೆ ಹಾಗೂ ಬಿಜೆಪಿ ಕಾರ್ಯಕರ್ತರು ಮಂಗಳವಾರ ಸ್ವಚ್ಛಗೊಳಿಸಿದ್ದಾರೆ.

ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 80 ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದರು. ಜೀವ ಜಲ ಕಾರ್ಯಪಡೆ ನೀರಿನ ವ್ಯವಸ್ಥೆ ಮಾಡಿತ್ತು. ಕ್ರೀಡಾಂಗಣದ ಸುತ್ತ ಸಾರ್ವಜನಿಕರು ಎಸೆದ ನೀರಿನ ಬಾಟಲ್, ತ್ಯಾಜ್ಯಗಳು, ತಿಂಡಿಯ ಪೊಟ್ಟಣಗಳ ರಾಶಿ ಬಿದ್ದಿತ್ತು. ಸೋಮವಾರ ಬೆಳಗ್ಗೆ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ಆದರೆ, ತ್ಯಾಜ್ಯದ ಪ್ರಮಾಣ ಜಾಸ್ತಿ ಇದ್ದ ಕಾರಣ ಮಂಗಳವಾರವೂ ಸ್ವಚ್ಛಗೊಳಿಸಿ ಟ್ರಾೃಕ್ಟರ್ ಮೂಲಕ ತ್ಯಾಜ್ಯ ಸಾಗಿಸಲಾಯಿತು.

ಹಳೆಯ ಕಸವೂ ಸ್ವಚ್ಛ !

ಜಿಲ್ಲಾ ಕ್ರೀಡಾಂಗಣವು ಇತ್ತೀಚಿನ ವರ್ಷಗಳಲ್ಲಿ ಮೋಜು ಮಸ್ತಿಯ ತಾಣವಾಗುತ್ತಿದೆ. ಕ್ರೀಡಾಂಗಣದ ಸುತ್ತ ರಾತ್ರಿ ವೇಳೆ ಪಾರ್ಟಿ ಮಾಡುವವರು ಜಾಸ್ತಿ. ಹೀಗಾಗಿ ಈ ವಾತಾವರಣದಲ್ಲಿ ಖಾಲಿ ಬಾಟಲ್ ಮತ್ತಿತರ ತ್ಯಾಜ್ಯ ತುಂಬಿತ್ತು. ಈ ಎಲ್ಲ ಹಳೇ ತ್ಯಾಜ್ಯವನ್ನೂ ಸಾಗಿಸಲಾಗಿದ್ದು, ಜಿಲ್ಲಾ ಕ್ರೀಡಾಂಗಣದ ಸುತ್ತಲಿನ ಪ್ರದೇಶ ಶುಭ್ರವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಗಿದೆ. ಇಲ್ಲಿ ಕಸ ಎಸೆಯುವವರ ಮೇಲೆ ಕಣ್ಣಿಡುತ್ತೇವೆ. ಈ ಪ್ರದೇಶವನ್ನು ತ್ಯಾಜ್ಯಗಳ ಬದಲು ಸುಂದರ ಪ್ರದೇಶವನ್ನಾಗಿಸಲಾಗುವುದು ಎಂದರು. ಬಿಜೆಪಿ ಕಾರ್ಯಕರ್ತರಾದ ಆರ್. ವಿ. ಹೆಗಡೆ ಚಿಪಗಿ, ಎಂ. ಎಂ. ಭಟ್ ಇತರರಿದ್ದರು.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…