ಶಿರಸಿ: ಉತ್ತರ ಕನ್ನಡದಲ್ಲಿ ಇಂದು ಒಂದೇ ದಿನ 21 ಕರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 354ಕ್ಕೆ ಏರಿದೆ.
ಇಂದು ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನದ ಪಕ್ಕದಲ್ಲೇ ಇರುವ ಮನೆಯ ವ್ಯಕ್ತಿಯೋರ್ವನಲ್ಲಿ ಕರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ದೇಗುಲವನ್ನು ಒಂದು ವಾರಗಳ ಕಾಲ ಸೀಲ್ಡೌನ್ ಮಾಡಲಾಗಿದೆ.
ಇವರು ಕಿರಾಣಿ ಖರೀದಿಗಾಗಿ ಹುಬ್ಬಳ್ಳಿಗೆ ತೆರಳಿದ್ದರು. ಜೂ.26ರಂದು ಶಿರಸಿಗೆ ವಾಪಸ್ ಬಂದಿದ್ದರು. ನಂತರ ತಾವು ಹುಬ್ಬಳ್ಳಿಯಿಂದ ತಂದಿದ್ದ ಕಿರಾಣಿ ವಸ್ತುಗಳನ್ನು ನಗರದ ಹಲವು ಅಂಗಡಿಗಳಿಗೆ ವಿತರಣೆ ಮಾಡಿದ್ದರು. ಅಷ್ಟೇ ಅಲ್ಲ ಪ್ರತಿದಿನ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆಯುತ್ತಿದ್ದರು. ಇದನ್ನೂ ಓದಿ: ರಕ್ಷಣಾ ಪಡೆಗಳ ದಾಳಿಗೆ ನಾಲ್ವರು ಮಾವೋವಾದಿಗಳು ಉಡೀಸ್…; ಓರ್ವ ಮಹಿಳಾ ನಕ್ಸಲ್ ಕೂಡ ಬಲಿ
ಜು.1ರಂದು ಈ ವ್ಯಕ್ತಿಯಲ್ಲಿ ಜ್ವರ ಕಾಣಿಸಿಕೊಂಡಿತ್ತು. ನಗರದ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನೂ ಪಡೆದಿದ್ದರು. ಬಳಿಕ ಆ ಆಸ್ಪತ್ರೆ ವೈದ್ಯರು ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದರು. ನಂತರ ವ್ಯಕ್ತಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಕರೊನಾ ದೃಢಪಟ್ಟಿದೆ. ಹಾಗಾಗಿ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದನ್ನೂ ಓದಿ: ಕೇಳಿದಷ್ಟು ಬೆಡ್ಗಳನ್ನು ಕೊಟ್ಟಿಲ್ಲ ಖಾಸಗಿ ಆಸ್ಪತ್ರೆಗಳು; ಚಿಕಿತ್ಸೆ ಕೊಡದಿದ್ರೆ ಕ್ರಿಮಿನಲ್ ಕೇಸ್ ಎಂದ್ರು ಸಚಿವ ಸುಧಾಕರ್
ಇವರು ಪ್ರತಿದಿನ ದೇವಸ್ಥಾನಕ್ಕೆ ಬರುತ್ತಿದ್ದುದರಿಂದ ದೇಗುಲವನ್ನು ಸೀಲ್ಡೌನ್ ಮಾಡಲಾಗಿದೆ. ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇನ್ನು ಒಂದು ವಾರ ದೇಗುಲದಲ್ಲಿ ಅರ್ಚಕರು ಪೂಜೆ ಮಾಡಬಹುದು ವಿನಃ ಭಕ್ತರಿಗೆ ಪ್ರವೇಶ ಇರುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟೇಶ್ ನಾಯ್ಕ್ ತಿಳಿಸಿದ್ದಾರೆ.
ಗರ್ಭಿಣಿಯ ತುಂಬಿದ ಹೊಟ್ಟೆಯನ್ನು ಮುತ್ತಿಕೊಂಡ ಜೇನು ನೊಣಗಳು…; ದಿಗಿಲಾಗುವಂಥ ಫೋಟೋ ವೈರಲ್