ಸ್ಥಳೀಯ ವಸ್ತುಗಳಿಗೆ ಮಾರುಕಟ್ಟೆ ವಿಸ್ತರಣೆ: ಬಿವೈಆರ್

railway

ಶಿವಮೊಗ್ಗ: ಒಂದು ನಿಲ್ದಾಣ-ಒಂದು ಉತ್ಪನ್ನ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಆರ್ಥಿಕ ಪ್ರಗತಿಗೂ ಇದು ಸಹಕಾರಿಯಾಗಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

blank

ಒಂದು ನಿಲ್ದಾಣ-ಒಂದು ಉತ್ಪನ್ನ ಯೋಜನೆಗೆ ಅಹಮದಾಬಾದ್‌ನಿಂದ ವರ್ಚುವಲ್ ಮೂಲಕ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲೂ ಇಳಕಲ್ ಸೀರೆ ವ್ಯಾಪಾರ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಯಿಂದ ರಾಜ್ಯದ ಉತ್ಪನ್ನಗಳನ್ನು ಜನಪ್ರಿಯಗೊಳಿಸಲು ಅನುಕೂಲವಾಗಲಿದೆ ಎಂದರು.
ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದ ನಮ್ಮ ರಾಜ್ಯದ ಪರಂಪರೆಯಾದ ಇಳಕಲ್ ಸೀರೆ ವ್ಯಾಪಾರಕ್ಕೆ ಚಾಲನೆ ನೀಡಲಾಗಿದೆ. ದೇಶಾದ್ಯಂತ ಸ್ಥಳೀಯ ಉತ್ಪನ್ನಗಳು, ಕರಕುಶಲ ವಸ್ತುಗಳು, ಕೈಮಗ್ಗದ ಉತ್ಪನ್ನಗಳು, ಸಂಸ್ಕರಿಸಿದ ಆಹಾರ ಪದಾರ್ಥಗಳಿಗೆ ಮಾರುಕಟ್ಟೆ ವಿಸ್ತರಣೆಯಾಗಲಿದೆ ಎಂದು ಹೇಳಿದರು.
ಲಕ್ಷಾಂತರ ಕಿ.ಮೀ. ವಿಸ್ತಾರವಾಗಿರುವ ರೈಲ್ವೆ ಮಾರ್ಗವನ್ನು ಡಿಜಿಟಲ್ ಹಾಗೂ ಕೇಂದ್ರೀಕೃತ ವ್ಯವಸ್ಥೆಯ ನಿಯಂತ್ರಣವನ್ನು ಗುಜರಾತ್‌ನಲ್ಲಿ ರೂಪಿಸಲಾಗಿದೆ. ಇದು ಆಧುನೀಕರಣದ ಪ್ರತೀಕ ಎಂದು ಅಭಿಪ್ರಾಯಪಟ್ಟರು. ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಎಸ್.ದತ್ತಾತ್ರಿ ಇತರರಿದ್ದರು.
ಇಳಕಲ್ ಸೀರೆ-ಖಾದಿ ಉತ್ಪನ್ನ: ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಒಂದು ನಿಲ್ದಾಣ-ಒಂದು ಉತ್ಪನ್ನ ಯೋಜನೆಯಡಿ ಧಾರವಾಡದ ಇಳಕಲ್ ಸೀರೆ ಹಾಗೂ ಖಾದಿ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲಾಗಿದೆ. ಇನ್ನೂ 15 ದಿನಗಳ ಕಾಲ ಮಳಿಗೆ ನಿಲ್ದಾಣದ ಆವರಣದಲ್ಲಿ ಇರಲಿದೆ. 700 ರೂ.ನಿಂದ ಆರಂಭಗೊಂಡು 2500 ರೂ.ವರೆಗಿನ ಸೀರೆಗಳು, ಕಾಟನ್ ಡ್ರೆಸ್ ಮೆಟೀರಿಯಲ್ಸ್, ಖಾದಿ ಕಾಟನ್ ಅಂಗಿಗಳು ಮತ್ತು ಜುಬ್ಬಾ, ಟವೆಲ್, ಲುಂಗಿ ಖರೀದಿಸಬಹುದು. ಉದ್ಘಾಟನೆ ಬಳಿಕ ಸಾಕಷ್ಟು ಮಂದಿ ಮಳಿಗೆಗೆ ಭೇಟಿ ನೀಡುತ್ತಿದ್ದಾರೆ ಎಂದು ಮಳಿಗೆ ನಿರ್ವಹಿಸುತ್ತಿರುವ ದರ್ಶನ್ ತಿಳಿಸಿದ್ದಾರೆ.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank