ಚಿತ್ರದುರ್ಗ: ಅಂತರ್ಜಾತಿ ವಿವಾಹಕ್ಕೆ ಪಾಲಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಪ್ರೇಮಿಗಳು ಚಿತ್ರದುರ್ಗದ ದೇವಾಲಯದಲ್ಲಿ ವಿವಾಹ ನೆರವೇರಿಸಿಕೊಂಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಖಾನಾಹೊಸಳ್ಳಿ ಗ್ರಾಮದ ಸಂದೀಪ್ ಮತ್ತು ನಂದಿನಿ ಎಂಬುವವರು ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮದ ಶ್ರೀರಂಗನಾಥ ದೇವಾಲಯದಲ್ಲಿ ಗ್ರಾಮಸ್ಥರು ಹಾಗೂ ಸಂಬಂಧಿಕರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.
ಸಂದೀಪ್ ಹಾಗೂ ನಂದಿನಿ ಇಬ್ಬರು ಅನ್ಯ ಜಾತಿಯವರು. ಹೀಗಾಗಿ ಎರಡು ಕುಟುಂಬದ ಪಾಲಕರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಪಾಲಕರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ ದುರ್ಗಾವರ ಗ್ರಾಮಸ್ಥರು ಹಾಗೂ ಸಂಬಂಧಿಕರು ಮುಂದೆ ನಿಂತು ವಿವಾಹ ನೆರವೇರಿಸಿದ್ದಾರೆ. (ದಿಗ್ವಿಜಯ ನ್ಯೂಸ್)