ಸಮರ ಸಂಘರ್ಷ; ಪಾಕ್​ ಮೇಲೆ ಭಾರತ ಜಲ ದಾಳಿ; ಪಾಕಿಸ್ತಾನಕ್ಕೆ ಪ್ರವಾಹ ಭೀತಿ| Flood threat

blank

Pakistan| ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ, ಭಾರತ ಮತ್ತೆ ಜಲ ಮುಷ್ಕರ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ, ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸಲಾಲ್ ಅಣೆಕಟ್ಟು ಮತ್ತು ಬಗ್ಲಿಹಾರ್ ಅಣೆಕಟ್ಟಿನ ಹಲವಾರು ಗೇಟ್‌ಗಳನ್ನು ತೆರೆಯಲಾಗಿದ್ದು, ಇದರಿಂದಾಗಿ ಪಾಕಿಸ್ತಾನದ ಕಡೆಗೆ ನೀರಿನ ಹರಿವು ಹೆಚ್ಚಾಗಿದೆ.

blank

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿತ್ತು. ಕಳೆದ ಕೆಲವು ದಿನಗಳ ಹಿಂದೆ, ಭಾರತವು ಪಾಕಿಸ್ತಾನದ ಕಡೆಗೆ ನೀರು ಹರಿಯುವುದನ್ನು ನಿಲ್ಲಿಸಲು ಸಲಾಲ್ ಮತ್ತು ಬಾಗ್ಲಿಹಾರ್ ಅಣೆಕಟ್ಟುಗಳ ದ್ವಾರಗಳನ್ನು ಮುಚ್ಚಿತ್ತು. ಇದರಿಂದಾಗಿ ಪಾಕಿಸ್ತಾನದ ಚೆನಾಬ್ ನದಿಯ ನೀರಿನ ಮಟ್ಟ ಗಣನೀಯವಾಗಿ ಕಡಿಮೆಯಾಗಿತ್ತು. ಆದರೆ ಈಗ ಭಾರೀ ಮಳೆ ಮತ್ತು ಜಲಾಶಯಗಳು ತುಂಬಿದ ಬಳಿಕ, ಭಾರತವು ಗೇಟ್‌ಗಳನ್ನು ತೆರೆದಿದೆ, ಇದರಿಂದಾಗಿ ಹೆಚ್ಚಿನ ಪ್ರಮಾಣದ ನೀರು ಪಾಕಿಸ್ತಾನದ ಕಡೆಗೆ ಹರಿಯುತ್ತಿದೆ.

ಇದನ್ನೂ ಓದಿ:ಪಾಕ್​ನಿಂದ ಉದ್ವಿಗ್ನತೆ; ಮೂರು ಸೇನಾ ಮುಖ್ಯಸ್ಥರೊಂದಿಗೆ ರಾಜನಾಥ್​​ ಸಿಂಗ್​ ರಹಸ್ಯ ಸಭೆ| Meeting

ಪ್ರವಾಹ ಸನ್ನಿವೇಶದ ಒತ್ತಡ ಸೃಷ್ಟಿಸಲು ನೀರು ಹರಿಬಿಡುವ ತಂತ್ರಗಾರಿಕೆ ರೂಪಿಸಲಾಗಿದೆ ಎಂದು ರಕ್ಷಣಾ ತಜ್ಞರು ವಿಶ್ಲೇಷಿಸಿದ್ದಾರೆ. ನೀರಿನ ಹರಿವಿನಲ್ಲಿಏರಿಳಿತ ಮಾಡುವ ಮೂಲಕ ಕೃಷಿ ವ್ಯವಸ್ಥೆಗೆ ಬಲವಾದ ಪೆಟ್ಟು ಕೊಡಲಾಗುತ್ತಿದೆ. ಜತೆಗೆ ಪಾಕಿಸ್ತಾನದಲ್ಲಿ ನೀರಿನ ಅಭಾವ ಉಂಟು ಮಾಡುವುದು ತಂತ್ರಗಾರಿಕೆಯ ಭಾಗವಾಗಿದೆ ಎನ್ನಲಾಗಿದೆ.
ಒಂದೆಡೆ ನೀರಿನ ಕೊರತೆಯಿಂದ ಕೃಷಿ ವಲಯಕ್ಕೆ ತೊಂದರೆಯಾಗಿತ್ತು, ಈಗ ಪ್ರವಾಹದ ಭೀತಿಯಿಂದ ಜನ ತಲ್ಲಣಗೊಂಡಿದ್ದಾರೆ. ಈ ಬಗ್ಗೆ ಭಾರತವನ್ನು ದೂಷಿಸಲು ಪಾಕಿಸ್ತಾನಕ್ಕೆ ಅವಕಾಶವಿಲ್ಲ, ಏಕೆಂದರೆ ಒಪ್ಪಂದ ರದ್ದಾದ ಬಳಿಕ ನೀರಿನ ನಿಯಂತ್ರಣ ಸಂಪೂರ್ಣವಾಗಿ ಭಾರತದ ಕೈಯಲ್ಲಿದೆ.

ಇದನ್ನೂ ಓದಿ:ಭಾರತದಲ್ಲಿ ಹೆಚ್ಚಿದ ಭದ್ರತೆ; ದೇಶದಾದ್ಯಂತ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್; ದೆಹಲಿಯ ಕೆಲ ವಿಮಾನಗಳ ಹಾರಾಟ ರದ್ದು|Flight cancellations

ಗುರುವಾರವೂ ಭಾರತವು ಲಾಹೋರ್ ಮತ್ತು ಕರಾಚಿ ಸೇರಿದಂತೆ ಪಾಕಿಸ್ತಾನದ 9 ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತ್ತು. ಈ ದಾಳಿಯು ಕರಾಚಿ ಬಂದರು, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ ಮತ್ತು ಯುದ್ಧ ವಿಮಾನಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಧ್ವಂಸವನ್ನುಂಟುಮಾಡಿದೆ. ಈಗ ಭಾರತ ಪಾಕಿಸ್ತಾನದ ವಿರುದ್ಧ ಜಲದಾಳಿ ನಡೆಸಿದೆ.
(ಏಜೆನ್ಸೀಸ್)

ಪಾಕಿಸ್ತಾನದ ವಿರುದ್ಧ S-400 ಕ್ಷಿಪಣಿ ಸಮರ; ಈ ವಾಯು ರಕ್ಷಣಾ ವ್ಯವಸ್ಥೆ ಬೇರೆ ದೇಶಗಳಲ್ಲೂ ಇದ್ಯಾ| S-400 Missile

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…