More

    ಮಾರಮ್ಮನಿಗೆ ಮುಸುಕಿನ ಜೋಳದ ತೆನೆ ಸಿಂಗಾರ

    ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಶನಿವಾರ ದೇವಿಯ ಮೂರ್ತಿಗೆ ಮುಸುಕಿನ ಜೋಳದ ತೆನೆಗಳಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

    ಅಮಾವಾಸ್ಯೆಯ ಅಂಗವಾಗಿ ದೇಗುಲವನ್ನು ತಳಿರು ತೋರಣದಿಂದ ಸಿಂಗರಿಸಲಾಯಿತು. ಬೆಳಗಿನ ಜಾವ 5 ಗಂಟೆಗೆ ಪನ್ನೀರು, ಎಳನೀರು, ಅರಿಶಿಣ, ಕುಂಕುಮ, ಜೇನುತುಪ್ಪ, ಹಾಲು, ಮೊಸರು ಹಾಗೂ ಗಂಧದ ಅಭಿಷೇಕವನ್ನು ನೆರವೇರಿಸಲಾಯಿತು. ಬಳಿಕ ದೇವಿ ಮೂರ್ತಿಗೆ ಮುಸುಕಿನ ಜೋಳದ ತೆನೆಗಳಿಂದ ಸಿಂಗರಿಸಲಾಯಿತು. ಪಂಚಾಮೃತ ಅಭಿಷೇಕ ಅರ್ಪಿಸಿ ಧೂಪದಾರತಿ, ಕೊಬ್ಬರಿ, ಬೆಲ್ಲ, ನಿಂಬೆಹಣ್ಣಿನ ಆರತಿ ಹಾಗೂ ಮಹಾಮಂಗಳಾರತಿ ನೆರವೇರಿಸಿ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.

    ಪಟ್ಟಣ ಸೇರಿದಂತೆ ಭೈರನತ್ತ, ಉದ್ದನೂರು, ಚಿಕ್ಕಮಾಲಾಪುರ, ಅಜ್ಜೀಪುರ, ಚಿಂಚಳ್ಳಿ, ಮಣಗಳ್ಳಿ, ಮಂಗಲ ಹಾಗೂ ಈ ಭಾಗದ ಇನ್ನಿತರ ಕಡೆಗಳಿಂದ ಆಗಮಿಸಿದ್ದ ಭಕ್ತರು ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇಗುಲದ ಮುಂಭಾಗದಲ್ಲಿ ಉಪ್ಪು ಸುರಿದು ಭಕ್ತಿ ಮೆರೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts