More

    ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ; ಶಾಸಕ ಅಮರೇಗೌಡ ಬಯ್ಯಪುರ ವಿಶ್ವಾಸ

    ಮಸ್ಕಿ: ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ. ಪ್ರತಾಪಗೌಡ ಸೋಲು ಖಚಿತ ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಪುರ ಹೇಳಿದರು.

    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್‌ನಿಂದ ಗೆದಿದ್ದ ಪ್ರತಾಪಗೌಡ ತಮ್ಮ ಸ್ವಾರ್ಥಕ್ಕಾಗಿ ಕ್ಷೇತ್ರದ ಜನರಿಗೆ ಮೋಸ ಮಾಡಿ ರಾಜೀನಾಮೆ ಸಲ್ಲಿಸಿ ಸರ್ಕಾರದ ಬೊಕ್ಕಸಕ್ಕೆ ಹೊರೆ ಮಾಡಿದ್ದಾರೆ ಎಂದು ವಾಗ್ದಳಿ ನಡೆಸಿದರು.

    ಜಿಲ್ಲೆಯ ಮುಖಂಡರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಾನು, ಹಂಪನಗೌಡರು, ಕೆ.ವಿರೂಪಾಕ್ಷಪ್ಪ, ಎನ್.ಎಸ್.ಬೋಸರಾಜು ಮತ್ತು ಹಂಪಯ್ಯ ನಾಯಕರೇ ಚುನಾವಣೆಗೆ ನಿಂತಂತೆ ಎಂದು ಅಮರೇಗೌಡ ಬಯ್ಯಪುರ ಸಮರ್ಥಿಸಿಕೊಂಡರು.

    ಮಾಜಿ ಎಂಎಲ್ಸಿ ಎನ್,ಎಸ್.ಬೋಸರಾಜು, ಮಾಜಿ ಶಾಸಕ ಹಂಪಯ್ಯ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಗ್ರಾಮೀಣ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ದೊಡ್ಡಬಸವರಾಜ, ಕೆ.ಕರಿಯಪ್ಪ, ಎಚ್.ಬಿ.ಮುರಾರಿ. ಶ್ರೀಶೈಲಪ್ಪ ಬ್ಯಾಳಿ, ಸಿದ್ದಣ ಹೂವಿನಬಾವಿ, ಆರ್.ಸಿದ್ದನಗೌಡ ಇದ್ದರು.

    ನ.23 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮಸ್ಕಿಗೆ ಆಗಮಿಸಲಿದ್ದಾರೆ. ಅಂದು ಆರ್.ಬಸನಗೌಡ ತುರ್ವಿಹಾಳ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.
    | ಹಂಪನಗೌಡ ಬಾದರ್ಲಿ ಮಾಜಿ ಶಾಸಕ, ಸಿಂಧನೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts