More

    ಶಾಸ್ತ್ರೀಯ ಭಾಷೆ ಸ್ಥಾನಮಾನ ಸದುಪಯೋಗವಾಗಲಿ

    ಮಸ್ಕಿ: ಕನ್ನಡ ನಾಡಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪುರಾತನ ಭಾಷೆಗೆ ಅನ್ಯಾಯವಾದಾಗ ಅದರ ಪರ ನಿಲ್ಲುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

    ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನ್ನಡ ಭಾಷೆಗೆ ಸಿಕ್ಕಿರುವ ಶಾಸ್ತ್ರೀಯ ಭಾಷೆ ಸ್ಥಾನಮಾನದ ಸದುಪಯೋಗ ಆಗಬೇಕಿದೆ ಎಂದರು. ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ ಕವಿತಾ ಆರ್., ಅನೇಕ ದಾರ್ಶನಿಕರು ಪ್ರಪಂಚಕ್ಕೆ ವಚನ, ದಾಸ ಸಾಹಿತ್ಯ ಪರಿಚಯಿಸಿದ್ದು ಕನ್ನಡ ನಾಡಿನ ಹಿರಿಮೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts