ಲಸಿಕಾ ಅಭಿಯಾನದ ಮಾಹಿತಿ ರೈತರಿಗೆ ನೀಡಿ

Untitled design(7)

ಮಸ್ಕಿ: ಪಟ್ಟಣದ ತಾಪಂ ಕಚೇರಿಯಲ್ಲಿ ಜಾನುವಾರುಗಳ ಸಾಮೂಹಿಕ ಲಸಿಕಾ ಅಭಿಯಾನದ ಪೋಸ್ಟರ್ ಅನ್ನು ಖಾದಿ ಗ್ರಾಮದ್ಯೋಗ ನಿಗಮ ಮಂಡಳಿ ಅಧ್ಯಕ್ಷ, ಶಾಸಕ ಬಸನಗೌಡ ತುರ್ವಿಹಾಳ ಗುರುವಾರ ಬಿಡುಗಡೆಗೊಳಿಸಿದರು.

ಪಶು ಸಂಗೋಪನೆ ಇಲಾಖೆ ಮೂಲಕ ಸರ್ಕಾರ ರೈತರ ಅನುಕೂಲಕ್ಕೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆಗಳ ಬಗ್ಗೆ ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಬೇಕು. ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಲಸಿಕಾ ಅಭಿಯಾನದ ಮಾಹಿತಿ ರೈತರಿಗೆ ನೀಡಿ, ಅಭಿಯಾನ ಯಶಸ್ವಿ ಗೊಳಿಸಬೇಕು ಎಂದು ಶಾಸಕ ಬಸನಗೌಡ ತುರ್ವಿಹಾಳ ಹೇಳಿದರು.

ಪಶು ಇಲಾಖೆ ಜಂಟಿ ನಿರ್ದೇಶಕ ಡಾ.ಎಸ್.ಎಸ್. ಪಾಟೀಲ್ ಮಾತನಾಡಿ, ಜಾನುವಾರುಗಳಿಗೆ ಕಾಲು, ಬಾಯಿ ರೋಗ ತಡೆಗಟ್ಟಲು ಲಸಿಕಾ ಅಭಿಯಾನ ಆರಂಭಿಸಲಾಗಿದೆ ಎಂದರು. ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ. ಅಮರೇಗೌಡ, ತಾಪಂ ಇಒ ಅಮರೇಶ ಯಾದವ್, ಪ್ರಮುಖರಾದ ಸೋಮನಗೌಡ ಪಾಟೀಲ್, ವಿನೋದ ಗುಪ್ತಾ ಇತರರಿದ್ದರು.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…