ಶಾಸಕ ಯತ್ನಾಳರ ಉಚ್ಚಾಟನೆಗೆ ಖಂಡನೆ, ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರತಿಭಟನೆ

PANCHAMASALI PROTEST GANDHI CHOUCK

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಖಂಡಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಸಮಾಜದ ಜನ ಶಾಸಕ ಯತ್ನಾಳ ಪರ ಘೋಷಣೆ ಕೂಗಿದರಲ್ಲದೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರಹಾಕಿದರು.

ಕೇಸರಿ ಧ್ವಜ ಹಿಡಿದು ರಾರಾಜಿಸಿದ ಪಂಚಮಸಾಲಿ ಸಮಾಜದವರು ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಮೊಳಗಿಸಿದರು. ಜೈ ಪಂಚಮಸಾಲಿ ಎಂದು ಜಯ ಘೋಷ ಹಾಕಿದರು. ಮಾನವ ಸರಪಳಿ ನಿರ್ಮಿಸಿ ಯತ್ನಾಳ ಪರ ಒಗ್ಗಟ್ಟು ಪ್ರದರ್ಶಿಸಿದರು. ರಸ್ತೆ ತಡೆ ನಡೆಸಿದರು. ಇದರಿಂದ ಕೆಲ ಕಾಲ ಸಂಚಾರಕ್ಕೆ ವ್ಯತ್ಯಯವಾಯಿತು.

ಕೂಡಲೇ ಉಚ್ಚಾಟನೆ ನೀತಿ ಕೈ ಬಿಡದೇ ಹೋದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಮತ್ತು ಮುಂಬರುವ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಸನಗೌಡ ಪಾಟೀಲ ಯತ್ನಾಳರ ನೇರ-ನಿಷ್ಠುರ ನಾಯಕ. ಅವರು ಸತ್ಯವನ್ನೇ ನುಡಿದಿದ್ದಾರೆ. ಇದೀಗ ಅವರನ್ನು ಉಚ್ಚಾಟನೆ ಮಾಡಿರುವುದು ಕೇವಲ ಪಂಚಮಸಾಲಿ ಸಮುದಾಯಕ್ಕಷ್ಟೇ ಅಲ್ಲ; ಇಡೀ ಹಿಂದು ಧರ್ಮಕ್ಕೆ ನೋವಾಗಿದೆ ಎಂದರು.

ಮುಖಂಡರಾದ ಎಂ.ಎಸ್. ರುದ್ರಗೌಡರ, ಬಸನಗೌಡ ಪಾಟೀಲ ನಾಗರಾಳಹುಲಿ, ಸದಾಶಿವ ಗುಡ್ಡೋಡಗಿ, ನಿಂಗನಗೌಡ ಸೋಲಾಪುರ, ರವಿಗೌಡ ಪಾಟೀಲ, ಲಕ್ಷ್ಮಿ ಕನ್ನೊಳ್ಳಿ, ವಿವೇಕ ಸಜ್ಜನ ಮತ್ತಿತರರಿದ್ದರು.

Share This Article

ಈ ಗುಣಗಳನ್ನು ಹೊಂದಿರುವ ಜನರು ತಮ್ಮ ಜೀವನದುದ್ದಕ್ಕೂ ಶ್ರೀಮಂತರಾಗಿರುತ್ತಾರೆ..ಯಾಕೆ ಗೊತ್ತಾ?Chanakya Niti

Chanakya Niti: ಆಚಾರ್ಯ ಚಾಣಕ್ಯ ಅವರನ್ನು ಅವರ ಕಾಲದ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದೂ ಕರೆಯಲಾಗುತ್ತದೆ.…

ಬೇಸಿಗೆಯಲ್ಲಿ ತೆಂಗಿನಕಾಯಿ ನೀರು ಅಥವಾ ಕಬ್ಬಿನ ಜ್ಯೂಸ್​ ಯಾವುದು ಉತ್ತಮ! | Better In Summer

Better In Summer ; ಈ ಬಿರು ಬೇಸಿಗೆಯಲ್ಲಿ ಸಾಮಾನ್ಯವಾಗಿ ತಂಪಾದ ಅಥವಾ ಅಹ್ಲಾದಕಾರ ಆಹಾರ…

ಈ ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯಬೇಡಿ! ಅಕಸ್ಮಾತ್​ ನೀರು ಕುಡಿದ್ರೆ ಏನಾಗುತ್ತದೆ ಗೊತ್ತಾ? Fruits

Fruits: ಕೆಲವು ಸಂದರ್ಭಗಳಲ್ಲಿ, ಕೆಲವು ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವುದರಿಂದ ಅತಿಸಾರದ ಅಪಾಯ ಹೆಚ್ಚಾಗುತ್ತದೆ.…