ಗಣಿತ ಉಪನ್ಯಾಸಕರ ಕಾರ್ಯಾಗಾರ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಬ್ಬಿಣ ಕಡಲೆಯಾದ ಗಣಿತ ವಿಷಯವನ್ನು ಮಕ್ಕಳಿಗೆ ಸರಳೀಕರಿಸಿ ಹೇಳುವ ಪ್ರಯತ್ನ ಮಾಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಪಿ. ಸುರೇಶ ಹೇಳಿದರು.
ನಗರದ ಸಿ.ವಿ. ರಾಮನ್​ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಗಣಿತ ಉಪನ್ಯಾಸಕರ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಗಣಿತ ಉಪನ್ಯಾಸಕರ ವೇದಿಕೆ ಅಧ್ಯಕ್ಷ ಎಸ್​.ಆರ್​. ವಿಘ್ನೇಶಿ ಮಾತನಾಡಿ, ಇಂದಿನ ಮಕ್ಕಳಲ್ಲಿ ಗುಣಾತ್ಮಕ ಬೆಳವಣಿಗೆಗೆ ಎಲ್ಲ ಗಣಿತ ಉಪನ್ಯಾಕರು ಆಸಕ್ತಿಯಿಂದ ಪಾಠ ಮಾಡಬೇಕು. ಈ ಶೈಕ್ಷಣಿಕ ವರ್ಷದ ಫಲಿತಾಂಶವನ್ನು ಅತ್ಯುತ್ತಮವಾಗಿಸಲು ಎಲ್ಲ ಉಪನ್ಯಾಸಕರು ಕೈ ಜೋಡಿಸಬೇಕು ಎಂದರು.
ಆರ್​.ಬಿ. ಚವ್ಹಾಣ ಅವರು ದ್ವೀತಿಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಕುರಿತು ಮಾತನಾಡಿದರು. ಎಂ.ಎಲ್​. ಪಾಟೀಲ ಗಣಿತ ವಿಷಯ ಕುರಿತು ಉಪನ್ಯಾಸ ನೀಡಿದರು.
ಎ.ಎ. ಅತ್ತಾರ್​, ಕಾಲೇಜಿನ ಸಂಸ್ಥಾಪಕ ಗಿರೀಶ ಹಾದಿಮನಿ, ಕಾಲೇಜಿನ ಗಣಿತ ಉಪನ್ಯಾಸಕರು, ಶಿಕ್ಷಕರು, ಇತರರು ಇದ್ದರು.
ಅನುರಾಧಾ ಆರಾಧ್ಯಮಠ ಸ್ವಾಗತಿಸಿದರು. ಮಾರುತಿ ಕದಂ ವಂದಿಸಿದರು.

Share This Article

ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks

ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು.  ತುಪ್ಪ ಹಲವು…

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…