ಮೊದಲ ಬಾರಿಗೆ ಕೂಚ್ ಬೆಹಾರ್ ಟ್ರೋಫಿ ಜಯಿಸಿದ ಕರ್ನಾಟಕ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ಆತಿಥೇಯ ಕರ್ನಾಟಕ ತಂಡ 19 ವಯೋಮಿತಿಯ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಆರಂಭಿಕ ಬ್ಯಾಟರ್‌ ಪ್ರಖರ್‌ ಚತುರ್ವೇದಿ ಅಜೇಯ 404 ರನ್‌ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. … Continue reading ಮೊದಲ ಬಾರಿಗೆ ಕೂಚ್ ಬೆಹಾರ್ ಟ್ರೋಫಿ ಜಯಿಸಿದ ಕರ್ನಾಟಕ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ